", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/41278820250616024125filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen rabakavi" }, "editor": { "@type": "Person", "name": "9342210542" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬಾಗಲಕೋಟೆ: ಕಾಂಗ್ರೆಸ್ ಪಕ್ಷ ಅಧಿಕಾರ ಬರುವಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದ್ದು ನಮ್ಮ ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಗಳನ್ನ ಈಡೇರಿಸಿದ್ದು...Read more" } ", "keywords": " Bagalkot district meeting, executive committee meeting, Karnataka government updates, district-level initiatives, Bagalkot news, local governance, ", "url": "https://dashboard.publicnext.com/node" }
ಬಾಗಲಕೋಟೆ: ಕಾಂಗ್ರೆಸ್ ಪಕ್ಷ ಅಧಿಕಾರ ಬರುವಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದ್ದು ನಮ್ಮ ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಗಳನ್ನ ಈಡೇರಿಸಿದ್ದು ಆ ಒಂದು ಗ್ಯಾರಂಟಿಗಳನ್ನು ಪ್ರತಿ ಮನೆಮನೆಗೆ ತಲುಪಿಸುವ ಕಾರ್ಯ ಯುವ ಕಾಂಗ್ರೆಸ್ ತಂಡ ಮಾಡುತ್ತಿದೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್ಎಸ್ ಮಂಜುನಾಥಗೌಡ ಹೇಳಿದರು.
ನಗರದ ಕಂಠಿ ಸಭಾಭವನಲ್ಲಿ ಜಿಲ್ಲಾ ಮಟ್ಟದ ಕಾರ್ಯಕಾರಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಮುಂದೆಯೂ ಕೂಡ ಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಈ ಕರ್ನಾಟಕ ದ ಚುಕ್ಕಾಣಿ ಹಿಡಿಯಲಿದ್ದು ಆ ಒಂದು ನಿಟ್ಟಿನಲ್ಲಿ ಪ್ರತಿಯೊಂದು ಬ್ಲಾಕ್ ಅಸೆಂಬ್ಲಿ ಜಿಲ್ಲಾ ಕೇಂದ್ರಗಳಲ್ಲಿ ಯುವ ಕಾಂಗ್ರೆಸ್ ಅನ್ನು ಬಲಿಷ್ಠಗೊಳಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸುವ ಕಾರ್ಯ ಮಾಡುತ್ತಿದ್ದೆವೆ ಎಂದು ತಿಳಿಸಿದರು.
ಕೇಂದ್ರ ಬಿಜೆಪಿ ಸರ್ಕಾರ ಉದ್ಯಮಿಗಳ ಕೈಗೊಂಬೆಯಂತೆ ಆಡುತ್ತಿದ್ದು ಬಡವರಿಗೆ ಕೂಲಿಕಾರ್ಮಿಕರಿಗೆ ಜನಸಾಮಾನ್ಯರಿಗೆ ಅಗತ್ಯವಿರುವ ವಸ್ತುಗಳ ಬೆಲೆ ಗಳನ್ನು ಏರಿಸುತ್ತಿದ್ದು ಉದ್ಯಮಿಗಳ ಸಾಲವನ್ನು ಮನ್ನಾ ಮಾಡಿ ಈ ದೇಶದ ಜನರ ಮೇಲೆ ಹೊರೆಯನ್ನ ಹೊರಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಟೀಕಿಸಿದರು.
ಬಾಗಲಕೋಟೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಮಾರ್ ಆಲಗೂರು ಅಧ್ಯಕ್ಷತೆಯನ್ನು ವಹಿಸಿದ್ದರು ಯುವ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ನಿಗಮ ಭಂಡಾರಿ ಜಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ್ ತಿಮ್ಮಾಪುರ್. ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಅಬ್ದುಲ್ ದೇಸಾಯಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್ ಶಿವಣ್ಣರವರು, ಉಪಾಧ್ಯಕ್ಷ ಮಂಜುನಾಥ್ ಮುಚಕಂಡಿ ಬಾಗಲಕೋಟೆ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಂಜಯನಮಠ, ಜಿಲ್ಲಾ ಎಸ್ ಸಿ ಬ್ಲಾಕ್ ಅಧ್ಯಕ್ಷ ರಾಜು ಮನ್ನಿಕೆರಿ, ಸೇವಾದಳದ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಉತ್ತೂರವರು, ಬಾಗಲಕೋಟೆ ಗ್ರಾಮೀಣ ಮಹಿಳಾ ಘಟಕ ಅಧ್ಯಕ್ಷೆ ಮಂಜುಳಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಹುಬಲಿ ಜೈನ, ಜಿಲ್ಲೆಯ ಏಳು ಮತಕ್ಷೇತ್ರದ ಅಸೆಂಬ್ಲಿ ಅಧ್ಯಕ್ಷರುಗಳು ಬ್ಲಾಕ್ ಅಧ್ಯಕ್ಷರುಗಳು ಹಾಗೂ ಎಲ್ಲಾ ಜಿಲ್ಲಾ, ತಾಲೂಕ, ಬ್ಲಾಕ್ ಮಟ್ಟದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Kshetra Samachara
16/06/2025 02:42 pm