ಬಳ್ಳಾರಿ : ಸಂಡೂರು ತಾಲ್ಲೂಕಿನ ತಾರಾನಗರ ಗ್ರಾಮದ ಹೊರವಲಯದಲ್ಲಿರುವ ನಾರಿಹಳ್ಳ ಜಲಾಶಯವು ನಿರಂತರ ಮಳೆಯಿಂದ 25TMC ನೀರು ಸಂಗ್ರಹವಾಗಿದ್ದು, ಒಳ ಹರಿವು ಹೆಚ್ಚಳವಾಗಿದೆ. ಭಾನುವಾರ ಎರಡು ಗೇಟ್ಗಳ ಮೂಲಕ ನೀರನ್ನು ಹೊರ ಹರಿಬಿಡಲಾಗಿದೆ.
ಕಳೆದ ವರ್ಷ ಉತ್ತಮ ಮಳೆಯು ಸುರಿದ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ಭಾರೀ ಪ್ರಮಾಣದ ನೀರು ಸಂಗ್ರಹವಾಗಿತ್ತು. ಈ ವರ್ಷವೂ ಮುಂಗಾರು ಪೂರ್ವ ಮಳೆಯು ನಿರಂತರವಾಗಿ ಸುರಿದ ಪರಿಣಾಮ ಜಲಾಶಯವು ಅಲ್ಪ ಸಮಯದಲ್ಲೇ 25TMC ಯಷ್ಟು ನೀರು ಸಂಗ್ರಹವಾಗಿದ್ದು, ಒಳ ಹರಿವು 6000 ಕ್ಯೂಸೇಕ್ಸ್ ನಷ್ಟು ನೀರಿನ ಮಟ್ಟ ಹೆಚ್ಚಾಗಿದೆ.
ಈ ಬೆಳವಣಿಗೆಯಿಂದ ತಾರಾನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ಕೃಷಿಕರು ಇಂದಿನ ಮಳೆಯ ಹಿನ್ನೆಲೆಯಲ್ಲಿ ಈ ಬಾರಿ ಬೆಳೆ ಬೆಳವಣಿಗೆ ಉತ್ತಮವಾಗಬಹುದು ಎಂಬ ನಿರೀಕ್ಷೆಯಲ್ಲಿ ಇದ್ದಾರೆ.
ವೀರೇಶ್ ನಾಯಕ ಎಲ್, ಬಳ್ಳಾರಿ
PublicNext
16/06/2025 03:26 pm