", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/405356-1750215775-mb.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಹೊನಗನಹಳ್ಳಿ ಸವನಹಳ್ಳಿ ಬಳಿಯಲ್ಲಿ ನೂತನವಾಗಿ ನಿರ್ಮಾಣವಾದ ರೈಲ್ವೆ ಮೇಲ್ಸೇತುವೆಯನ್ನ ಸಂಸದ ರಮೇಶ ಜಿ...Read more" } ", "keywords": "Vijayapura, railway overbridge inauguration.", "url": "https://dashboard.publicnext.com/node" } ವಿಜಯಪುರ: ಕ್ರೆಡಿಟ್ ಪಡೆಯಲು ತರಾತುರಿಯಲ್ಲಿ ರೈಲ್ವೇ ಮೇಲ್ಸೇತುವೆ ಉದ್ಘಾಟಿಸಿದ್ರಾ ಸಂಸದ ಜಿಗಜಿಣಗಿ?
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಕ್ರೆಡಿಟ್ ಪಡೆಯಲು ತರಾತುರಿಯಲ್ಲಿ ರೈಲ್ವೇ ಮೇಲ್ಸೇತುವೆ ಉದ್ಘಾಟಿಸಿದ್ರಾ ಸಂಸದ ಜಿಗಜಿಣಗಿ?

ವಿಜಯಪುರ: ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಹೊನಗನಹಳ್ಳಿ ಸವನಹಳ್ಳಿ ಬಳಿಯಲ್ಲಿ ನೂತನವಾಗಿ ನಿರ್ಮಾಣವಾದ ರೈಲ್ವೆ ಮೇಲ್ಸೇತುವೆಯನ್ನ ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಬಿಜೆಪಿ ಮುಖಂಡರು ಲೋಕಾರ್ಪಣೆಗೊಳಿಸಿದರು.

ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಹೊನಗನಹಳ್ಳಿ ಸವನಹಳ್ಳಿ ಬಳಿಯ ರೈಲ್ವೆ ಮೇಲ್ಸೇತುವೆ ಆಗಬೇಕು ಎನ್ನುವುದು ಬಹುದಿನಗಳ ಬೇಡಿಕೆಯಾಗಿತ್ತು. ಇನ್ನೂ ಕ್ರೆಡಿಟ್ ತೆಗೆದುಕೊಳ್ಳಲು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹಾಗೂ ಮುಖಂಡರು ತರಾತುರಿಯಲ್ಲಿ ರೈಲ್ವೆ ಮೇಲ್ಸೇತುವೆ ಉದ್ಘಾಟಿಸಿದ್ದಾರಾ ಎಂಬ ಪ್ರಶ್ನೆ ಮೂಡುವಂತಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಗೈರಾಗಿದ್ದರು. ವೇದಿಕೆ ಮೇಲೆ ಬಿಜೆಪಿ ಮಾಜಿ ಸಚಿವರು, ಮಾಜಿ ಶಾಸಕರು, ಮುಖಂಡರಿದ್ರು, ರೈಲ್ವೆ ಇಲಾಖೆ ಅಧಿಕಾರಿಗಳು ಸಹಿತ ಕಾರ್ಯಕ್ರಮದಲ್ಲಿ ಗೈರಾಗಿದ್ದರು. ಇದೊಂದು ಬಿಜೆಪಿ ಕಾರ್ಯಕ್ರಮದಂತಿತ್ತು. ಮುಂದೆ ರೈಲ್ವೆ ಮೇಲ್ಸೇತುವೆ ಕ್ರೆಡಿಟ್ ವಾರ್ ಸ್ವರೂಪ ಪಡೆದ್ರೂ ಅಚ್ಚರಿ ಪಡಬೇಕಿಲ್ಲ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಆಗಿರೋದಕ್ಕೆ ಹೊನಗನಹಳ್ಳಿ ಸವನಹಳ್ಳಿ, ಮನಗೂಳಿ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಸಂಸದ ರಮೇಶ ಜಿಗಜಿಣಗಿಯವರನ್ನ ಸನ್ಮಾನಿಸಿ ಗೌರವಿಸಿದರು.

ಇನ್ನೂ ಇದೇ ವೇಳೆ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರಿಗೆ ನಾಲ್ಕು ಬಾರಿ ನಾನೇ ಫೋನ್ ಮಾಡಿದೆ. ರಿಸೀವ್ ಮಾಡಲಿಲ್ಲ, ಐದನೇ ಬಾರಿಗೆ ಅವರ ಆಪ್ತ ಸಹಾಯಕರು ರಿಸೀವ್ ಮಾಡಿ ವಿವಿಧ ಕಾರ್ಯಕ್ರಮದಲ್ಲಿ ಬ್ಯುಜಿ‌ ಇದ್ದಾರೆ ಎಂದರು. ಹೀಗಾಗಿ ನಾವೇ ಈಗ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಮಾಡಿದ್ವಿ‌. ನಾನೊಬ್ಬ ದಲಿತ ಮನುಷ್ಯ, ನನ್ನನ್ನು 40 ವರ್ಷಗಳ ಕಾಲ ರಾಜಕೀಯದಲ್ಲಿ ಬೆಳೆಸಿದ್ದೀರಿ ಎಂದು ಭಾವುಕರಾಗಿ ಮಾತನಾಡಿದ್ರು,

ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ್, ವಿಜಯಪುರ

Edited By : Vinayak Patil
PublicNext

PublicNext

18/06/2025 08:33 am

Cinque Terre

28.95 K

Cinque Terre

0

ಸಂಬಂಧಿತ ಸುದ್ದಿ