", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/38659820250621083753filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "9844461373" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತುಮಕೂರು : ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊನಸಿಗೆರೆ ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಯ ಇಂಗ್ಲೀಷ್ ಮ...Read more" } ", "keywords": "Node", "url": "https://dashboard.publicnext.com/node" }
ತುಮಕೂರು : ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊನಸಿಗೆರೆ ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಯ ಇಂಗ್ಲೀಷ್ ಮಾಧ್ಯಮವನ್ನು ಶಾಸಕ ಬಿ.ಸುರೇಶ್ಗೌಡರು ಉದ್ಘಾಟಿಸಿದರು.
ಲೋಕಸಭಾ ಮಾಜಿ ಉಪ ಸಭಾಪತಿ ದಿ.ಎಸ್.ಮಲ್ಲಿಕಾರ್ಜುನಯ್ಯನವರು ಓದಿದ ಶಾಲೆ ಎಂಬ ಹೆಗ್ಗಳಿಕೆ ಹೊಂದಿರುವ ಹೊನಸಿಗೆರೆ ಶಾಲೆಯಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಬೇಕು ಎಂಬುದು ಪೋಷಕರ ಬೇಡಿಕೆಯಾಗಿತ್ತು. ಅದರಂತೆ ಆಂಗ್ಲ ಮಾಧ್ಯಮ ಉದ್ಘಾಟನೆ ಮಾಡಿದ ಶಾಸಕರು, ಶಾಲೆಯ ಸ್ವಚ್ಛ ವಾತಾವರಣ, ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಆಡಿಯೊ ವಿಡಿಯೊ ಕೊಠಡಿ, ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ, ಅಡುಗೆ ಕೋಣೆಯ ವ್ಯವಸ್ಥೆ ಕಂಡು ಸಂತಸವ್ಯಕ್ತಪಡಿಸಿದರು. ಶಾಲೆಯ ಪುಟಾಣಿ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಶಾಸಕ ಸುರೇಶ್ಗೌಡರು ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಮಕ್ಕಳಲ್ಲಿ ಓದಿನ ಬಗ್ಗೆ ಆಸಕ್ತಿ ಬೆಳೆಸಿ ಅವರ ಜ್ಞಾನ ಮಟ್ಟ ಹೆಚ್ಚಿಸುವಂತೆ ಶಿಕ್ಷಕರಿಗೆ ಸಲಹೆ ಮಾಡಿದರು. ಬಾಲ್ಯದಿಂದಲೇ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಬೇಕು. ಅವರ ಕುತೂಹಲದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ದೊರಕಿಸಿ, ಆವರಲ್ಲಿ ಆಲೋಚನಾ ಶಕ್ತಿ ವೃದ್ಧಿ ಮಾಡುವಂತೆ ತಿಳಿಸಿದರು.
ಸರ್ಕಾರಿ ಶಾಲೆಗಳನ್ನು ಗುಣಮಟ್ಟದ ಶಿಕ್ಷಣ ನೀಡುವ ಮಾದರಿ ಶಾಲೆಗಳನ್ನಾಗಿ ರೂಪಿಸಬೇಕು. ಈ ಶಾಲೆಗೆ ಇನ್ನೇನು ಸೌಕರ್ಯಗಳು ಬೇಕು ಎಂಬುದನ್ನು ಪಟ್ಟಿ ಮಾಡಿ ನೀಡಿದರೆ ಒದಗಿಸಿಕೊಡುವುದಾಗಿ ಶಾಸಕರು ತಿಳಿಸಿದರು. ಇಸಿಓ ನಾಗರಾಜು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು ಭಾಗವಹಿಸಿದ್ದರು.
Kshetra Samachara
21/06/2025 08:37 am