", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1750594774-WhatsApp-Image-2025-06-22-at-5.48.57-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MaheshKalburgi" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಲಬುರಗಿ: ನನ್ನ ಕ್ಷೇತ್ರದಲ್ಲಿ ನನಗೆ ಗೊತ್ತಿಲ್ಲದೇ ಕೆಲವು ಸರಕಾರಿ ಕಾಮಗಾರಿ ನಡೆಯುತ್ತಿವೆ. ನನ್ನ ಕ್ಷೇತ್ರದಲ್ಲಿ ಶಿಷ್ಠಾಚಾರದ ಉಲ್ಲಂಘನೆ ಆಗುತ...Read more" } ", "keywords": "Kalaburagi, BR Patil MLA allegations, development work without knowledge, Karnataka politics.", "url": "https://dashboard.publicnext.com/node" } ಕಲಬುರಗಿ: ನನಗೆ ಗೊತ್ತಿಲ್ಲದಂತೆ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡ್ತಿದ್ದಾರೆ - ಶಾಸಕ ಬಿ.ಆರ್ ಪಾಟೀಲ್‌ ಆರೋಪ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ನನಗೆ ಗೊತ್ತಿಲ್ಲದಂತೆ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡ್ತಿದ್ದಾರೆ - ಶಾಸಕ ಬಿ.ಆರ್ ಪಾಟೀಲ್‌ ಆರೋಪ

ಕಲಬುರಗಿ: ನನ್ನ ಕ್ಷೇತ್ರದಲ್ಲಿ ನನಗೆ ಗೊತ್ತಿಲ್ಲದೇ ಕೆಲವು ಸರಕಾರಿ ಕಾಮಗಾರಿ ನಡೆಯುತ್ತಿವೆ. ನನ್ನ ಕ್ಷೇತ್ರದಲ್ಲಿ ಶಿಷ್ಠಾಚಾರದ ಉಲ್ಲಂಘನೆ ಆಗುತ್ತಿದೆ ಎಂದು ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ನನ್ನ ಕ್ಷೇತ್ರಕ್ಕೆ ಮೈನಾರಿಟಿ ಫಂಡ್‌ನಲ್ಲಿ 17 ಕೋಟಿ ರೂಪಾಯಿ ಹಣ ಬಂದಿದೆ. ಕಾಮಗಾರಿ ಸಹ ಶುರುವಾಗಿದೆ. ಆದರೆ ಗುದ್ದಲಿ ಪೂಜೆಗೂ ನನ್ನನ್ನು ಕರೆದಿಲ್ಲ. ಇಲ್ಲಿ ಸ್ಪಷ್ಟವಾಗಿ ಶಿಷ್ಠಾಚಾರದ ಉಲ್ಲಂಘನೆಯಾಗಿದೆ.

ಒಬ್ಬ ಶಾಸಕನಾಗಿ ಹಣ ಬಂದಿರುವುದು, ಕೆಲಸ ಶುರುವಾಗಿರುವುದು ನನಗೆ ಗೊತ್ತಿಲ್ಲ. KKRDBಯಿಂದ ಮೌಲಾನಾ ಅಬ್ದುಲ್ ಕಲಾಂ ಆಜಾದ್ ವಸತಿ ಶಾಲೆ ಕಟ್ಟುತ್ತಿದ್ದೇವೆ. ಈಗ ಮೈನಾರಿಟಿ ಇಲಾಖೆಯಿಂದ ಮತ್ತೆ 17 ಕೋಟಿ ಬಂದಿದೆ. ಇಲಾಖೆಯಿಂದ ಈ ರೀತಿ ಹಣ ಕೊಡುವುದಾದ್ರೆ ನಾನ್ಯಾಕೆ KKRDB ಯಿಂದ ತಗೊತಿದ್ದೆ? ಇದೇ KKRDB ಹಣ ನಾನು ಬೇರೆ ಕೆಲಸಕ್ಕಾದ್ರೂ ಬಳಸಿಕೊಳ್ಳುತ್ತಿದ್ದೆ ಎಂದು ಕೈ ಶಾಸಕ ಬಿ.ಆರ್ ಪಾಟೀಲ್ ಫುಲ್ ಗರಂ ಆಗಿದ್ದರು

Edited By : Shivu K
PublicNext

PublicNext

22/06/2025 05:50 pm

Cinque Terre

34 K

Cinque Terre

0

ಸಂಬಂಧಿತ ಸುದ್ದಿ