", "articleSection": "Politics,Infrastructure,Government,Agriculture", "image": { "@type": "ImageObject", "url": "https://prod.cdn.publicnext.com/s3fs-public/229640-1750598171-hvrr-copy.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ: ಸಚಿವ ಹೆಚ್.ಕೆ. ಪಾಟೀಲ್ ಅವರು ಸಿಎಂಗೆ ತನಿಖೆ ಮಾಡಿ ಅಂತ ಪತ್ರ ಬರೆಯುವುದರಲ್ಲಿ ತಪ್ಪೇನಿದೆ? ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ...Read more" } ", "keywords": "Haveri Minister Shivanagouda Patil, HK Patil CM letter controversy, Karnataka ministers, BJP Congress rivalry, ministerial feud ", "url": "https://dashboard.publicnext.com/node" }
ಹಾವೇರಿ: ಸಚಿವ ಹೆಚ್.ಕೆ. ಪಾಟೀಲ್ ಅವರು ಸಿಎಂಗೆ ತನಿಖೆ ಮಾಡಿ ಅಂತ ಪತ್ರ ಬರೆಯುವುದರಲ್ಲಿ ತಪ್ಪೇನಿದೆ? ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಪ್ರಶ್ನಿಸಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹೂಲಿಹಳ್ಳಿಯಲ್ಲಿ ಮಾತನಾಡಿದ ಅವರು, ಪ್ರತಿಶತ 7ರಷ್ಟಾದರೂ ಆಗಿದೆಯಲ್ಲಾ ಎಂದು ತಿಳಿಸಿದರು. ಹೆಚ್.ಕೆ.ಪಾಟೀಲ್ ಇನ್ನಷ್ಟು ವೇಗ ಪಡೆಯಲಿ ಎಂದಿದ್ದಾರೆ, ತೃಪ್ತಿ ತಂದಿಲ್ಲಾ. ಆದರೆ, ಅವರು ನೆನಪು ಮಾಡಿದ ನಂತರ ಮತ್ತಷ್ಟು ವೇಗ ಪಡೆಯುತ್ತೆ ಎಂದು ತಿಳಿಸಿದರು.
ರಾಣೆಬೆನ್ನೂರು ತಾಲೂಕಲ್ಲಿ ಕಳಪೆ ಬಿತ್ತನೆ ಬೀಜ ಮಾರಾಟವಿದೆ. ಈಗಾಗಲೇ ನಾಲ್ಕು ಅಂಗಡಿಗಳ ಮೇಲೆ ಕ್ರಮ ಕೈಗೊಂಡಿದ್ದೇವೆ. ಅವುಗಳ ಮೇಲೆ ಕ್ರಿಮಿನಲ್ ಕೇಸ್ ಬುಕ್ ಮಾಡಿದ್ದೇವೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. ರಾಣೆಬೆನ್ನೂರು ಬೀಜೋತ್ಪಾದನೆಯ ಕೇಂದ್ರವಾಗಿದ್ದು, ಇದೀಗ ಕಳಪೆ ಬಿತ್ತನೆ ಬೀಜ ಕೇಂದ್ರವಾಗುತ್ತಿದೆ ಎಂಬ ಆರೋಪವನ್ನು ಸಚಿವ ಶಿವಾನಂದ ಪಾಟೀಲ್ ತಳ್ಳಿ ಹಾಕಿದರು.
ರೈತರ ಆತ್ಮಹತ್ಯೆಯಲ್ಲಿ ಹಾವೇರಿ ಜಿಲ್ಲೆ ಪ್ರಥಮವಾಗಿದೆ.ಇದಕ್ಕೆ ನೀವು ಏನು ಕ್ರಮ ಕೈಗೊಳ್ಳುತ್ತೀರಿ? ಎಂಬ ಪ್ರಶ್ನೆಗೆ ಗರಂ ಆದ ಸಚಿವ ಶಿವಾನಂದ ಪಾಟೀಲ್, ಮಾಧ್ಯಮದವರು ಕಾಂಟ್ರವರ್ಸಿ ಮಾಡಬಾರದು. ಅಕಸ್ಮಿಕವಾದ ಸಣ್ಣ ಘಟನೆಗಳನ್ನು ಸಹ ರೈತ ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತದೆ. ನಾನು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವನಾಗಿದ್ದಕ್ಕೂ ಜಿಲ್ಲೆಯು ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ರಾಜ್ಯಕ್ಕೆ ಪ್ರಥಮವಾಗಿದ್ದಕ್ಕೂ ಯಾವುದೇ ಸಂಬಂಧವಿಲ್ಲಾ ಎಂದರು.
PublicNext
22/06/2025 06:46 pm