", "articleSection": "Politics,Infrastructure,Nature,Government", "image": { "@type": "ImageObject", "url": "https://prod.cdn.publicnext.com/s3fs-public/229640-1750674011-BJ.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯಾಯಧೀಕರಣದ ತೀರ್ಪು ಬಂದು ದಶಕ ಕಳೆದರೂ ಕೂಡ ರಾಜ್ಯ ಸರ್ಕಾರಕ್ಕೆ ಕೃಷ್ಣಾ ಯ...Read more" } ", "keywords": "Almatti dam height increase, protest in Vijayapura, water resource management, dam height issue, farmers' demand, June 30th protest, Karnataka water crisis, dam management controversy", "url": "https://dashboard.publicnext.com/node" }
ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯಾಯಧೀಕರಣದ ತೀರ್ಪು ಬಂದು ದಶಕ ಕಳೆದರೂ ಕೂಡ ರಾಜ್ಯ ಸರ್ಕಾರಕ್ಕೆ ಕೃಷ್ಣಾ ಯೋಜನೆ ಮುಗಿಸುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನಲೆಯಲ್ಲಿ ರೈತ ಮುಖಂಡರು ರೈತ ಸಂಘಟನೆಗಳು ಹಾಗೂ ಆಲಮಟ್ಟಿ ಎತ್ತರ ಹೋರಾಟ ಸಮಿತಿಯಿಂದ ಜೂನ್ 30 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿಸಬೇಕು. ಆಲಮಟ್ಟಿ ಅಣೆಕಟ್ಟನ್ನು 524 ಮೀಟರ್ ಗೆ ಎತ್ತರಿಸಿ ಗೇಟ್ ಅಳವಡಿಸಿ ನೀರು ನಿಲ್ಲಿಸಿ ಸಮಗ್ರ ನೀರಾವರಿಗೆ ಅನುಕೂಲ ಮಾಡಿಕೊಡಬೇಕು ಎನ್ನುವುದು ರೈತರ ಪ್ರಮುಖ ಬೇಡಿಕೆಯಾಗಿದೆ.
ಇನ್ನೂ ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸಲು 2010ರಲ್ಲಿ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ನೇತೃತ್ವದಲ್ಲಿ 2ನೇ ನ್ಯಾಯಾಧೀಕರಣ ತೀರ್ಪು ನೀಡಿದೆ. 2013 ರಲ್ಲಿ ಅಂತಿಮ ತೀರ್ಪು ನೀಡಲಾಗಿದೆ. ಕೋರ್ಟ್ ಆದೇಶ ಆಗಿ 15 ವರ್ಷ ಕಳೆದರೂ ಕೂಡ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುತ್ತೇವೆ ಎಂದು ನೆಪ ಹೇಳುತ್ತಿದ್ದಾರೆ. ಇನ್ನೂ ರೈತರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಂಸದ ರಮೇಶ ಜಿಗಜಿಣಗಿ ಕೂಡಾ ತಿಳಿಸಿದ್ದಾರೆ.
ರೈತರ ಹೋರಾಟ ಇದು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವಿಚಾರವಾಗಿ ಜಿಲ್ಲೆಯ ಶಾಸಕರು ಸಂಸದರು ರಾಜ್ಯ ಹಾಗೂ ಕೇಂದ್ರ ಸರಕಾರದ ಮುಂದೆ ಕೃಷ್ಣ ಮೇಲ್ದಂಡೆ ಯೋಜನೆಯ ಬಗ್ಗೆ ಮನವರಿಕೆ ಮಾಡಿ ಕಾಮಗಾರಿಗೆ ವೇಗ ಕೊಡಿಸಿ, ಈ ಭಾಗದ ರೈತರಿಗೆ ನ್ಯಾಯ ಕೊಡಿಸುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ.
ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ್, ವಿಜಯಪುರ
PublicNext
23/06/2025 03:50 pm