", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1750753623-WhatsApp-Image-2025-06-24-at-1.56.50-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarChikkaballapur" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಂತಾಮಣಿ: ಶಾಲೆ ಮತ್ತು ಕಾಲೇಜುಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿಂತಾಮಣಿ ತಾಲೂಕು ಹಿಂದುಳಿ...Read more" } ", "keywords": "Chikkaballapur outsourced employees, demands, protest, contract workers, labor rights.", "url": "https://dashboard.publicnext.com/node" } ಚಿಕ್ಕಬಳ್ಳಾಪುರ: ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ

ಚಿಂತಾಮಣಿ: ಶಾಲೆ ಮತ್ತು ಕಾಲೇಜುಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿಂತಾಮಣಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಕಚೇರಿ ಮುಂದೆ ಧರಣಿ ನಡೆಸಿದರು. ಕನಿಷ್ಠ ವೇತನ, ಕೆಲಸದ ಭದ್ರತೆ ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಗಮನಹರಿಸಬೇಕೆಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಕಳೆದ15-20 ವರ್ಷಗಳಿಂದ ಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದೇವೆ. ನಮಗೆ ಯಾವುದೇ ಉದ್ಯೋಗ ಭದ್ರತೆ ಇಲ್ಲ. ಖಾಯಂ ನೌಕರರ ವರ್ಗಾವಣೆಯಿಂದ ಹೊರಗುತ್ತಿಗೆ ನೌಕರರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿರುವ ಅಡುಗೆಯವರು,ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್, ಕಂಪ್ಯೂಟರ್ ಆಪರೇಟ‌ರ್, ಡಾಟಾ ಎಂಟ್ರಿ ಆಪರೇಟರ್‌ಗಳು ಸೇರಿದಂತೆ ರಾಜ್ಯದ ಸಾವಿರಾರು ನೌಕರರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

Edited By : Shivu K
PublicNext

PublicNext

24/06/2025 01:57 pm

Cinque Terre

15.56 K

Cinque Terre

0