", "articleSection": "Others", "image": { "@type": "ImageObject", "url": "https://prod.cdn.publicnext.com/s3fs-public/28305320250625114935filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕೋಲಾರ - ಕ್ರೀಡೆಗಳಿಂದ ಉತ್ತಮ ಆರೋಗ್ಯದ ಜೊತೆಗೆ ಸದಾ ಕ್ರಿಯಾಶೀಲರಾಗಿರಲು ಸಹಕಾರಿಯಾಗಿದ್ದು ಪಠ್ಯ ಕಲಿಕೆಗೆ ಆಸಕ್ತಿ ಇಮ್ಮಡಿಗೊಳ್ಳುತ್ತದೆ ಎಂದ...Read more" } ", "keywords": "Node", "url": "https://dashboard.publicnext.com/node" }
ಕೋಲಾರ - ಕ್ರೀಡೆಗಳಿಂದ ಉತ್ತಮ ಆರೋಗ್ಯದ ಜೊತೆಗೆ ಸದಾ ಕ್ರಿಯಾಶೀಲರಾಗಿರಲು ಸಹಕಾರಿಯಾಗಿದ್ದು ಪಠ್ಯ ಕಲಿಕೆಗೆ ಆಸಕ್ತಿ ಇಮ್ಮಡಿಗೊಳ್ಳುತ್ತದೆ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ತಾಹೇರಾ ನುಸ್ರತ್ ಕರೆ ನೀಡಿದರು. ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಟ್ಟದ ಕ್ರೀಡಾಕೂಟಕ್ಕೆ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಕ್ರೀಡೆಗಳಿಂದ ಉತ್ತಮ ಆರೋಗ್ಯದ ಜತೆಗೆ ಕ್ರಿಯಾಶೀಲತೆ ನಿಮ್ಮದಾಗಲಿದ್ದು, ಆಟೋಟಗಳಿಗೆ ಆದ್ಯತೆ ನೀಡಿದರೆ ಜೀವನದಲ್ಲಿ ಶಿಸ್ತು, ವ್ಯಕ್ತಿತ್ವ ವಿಕಸನವೂ ಆಗಲಿದೆ, ನಿಮ್ಮಲ್ಲಿ ವಿದ್ಯೆ ಕಲಿಯುವ ಆಸಕ್ತಿಯೂ ಹೆಚ್ಚಲಿದೆ ಎಂದು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಮಕ್ಕಳನ್ನು ಪಠ್ಯಕ್ಕೆ ಸೀಮಿತಗೊಳಿಸುವ ಪ್ರಯತ್ನ ಪೋಷಕರಿಂದ ನಡೆಯುತ್ತಿದೆ, ಉತ್ತಮ ಅಂಕಗಳ ನಿರೀಕ್ಷೆಯಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ವಿಷಾದಿಸಿದ ಅವರು, ಶಾರೀರಿಕ, ಮಾನಸಿಕ ಆರೋಗ್ಯದ ಜತೆಗೆ ಜೀವನದಲ್ಲಿ ಶಿಸ್ತು ಮೂಡಲು ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಭಾಗವಾಗಿದೆ ಎಂದು ತಿಳಿಸಿದರು.
Kshetra Samachara
25/06/2025 11:49 am