", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1750903143-WhatsApp-Image-2025-06-26-at-7.28.52-AM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಸ್ಕಿ: 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿಕೆಯಿಂದ ಪ್ರಜಾಪ್ರಭುತ್ವದ ಕತ್ತುಹಿಸುಕಿದಂತಾಗಿದ...Read more" } ", "keywords": "Maski, Pratap Gowda, criticism of Emergency, democracy, political issues, Karnataka news. ", "url": "https://dashboard.publicnext.com/node" }
ಮಸ್ಕಿ: 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿಕೆಯಿಂದ ಪ್ರಜಾಪ್ರಭುತ್ವದ ಕತ್ತುಹಿಸುಕಿದಂತಾಗಿದೆ. ಇದು ಭಾರತೀಯ ರಾಜಕಾರಣದ ಕರಾಳ ಅಧ್ಯಾಯ ಎಂದು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ವಾಗ್ದಾಳಿ ನಡೆಸಿದರು.
ಬುಧವಾರ ಮಸ್ಕಿ ಪಟ್ಟಣದಲ್ಲಿ ತುರ್ತು ಪರಿಸ್ಥಿತಿಯ 50ನೇ ವರ್ಷದ ಕರಾಳ ದಿನದ ಅಂಗವಾಗಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 1947ರಲ್ಲಿ ಅನೇಕ ಮಹನೀಯರ ತ್ಯಾಗದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತು. ಆದರೆ ತುರ್ತು ಪರಿಸ್ಥಿತಿ ಮೂಲಕ ಅಂದಿನ ಪ್ರಧಾನಮಂತ್ರಿ ಸ್ವಾತಂತ್ರ್ಯ ಹರಣ ಮಾಡಿದರು. 21 ತಿಂಗಳ ಕಾಲ ವ್ಯಕ್ತಿ, ವಾಕ್ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಸುಲಿಗೆ ಮಾಡಲಾಯಿತು ಎಂದರು.
ಅವಕಾಶಕ್ಕಾಗಿ ಇಂದಿರಾ ಗಾಂಧಿ ಹೇರಿದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಯುದ್ಧ, ಬರ, ನೆರೆ ಅಥವಾ ಗಂಭೀರ ತೊಂದರೆಗಳಿಲ್ಲದೇ ಇದ್ದರೂ ಅಧಿಕಾರದ ಲಾಲಸೆಯಿಂದ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಆ ಸಮಯದಲ್ಲಿ ಆರ್ಎಸ್ಎಸ್ ಹಾಗೂ ಜನಸಂಘದ ಹೋರಾಟಗಾರರನ್ನು ಬಂಧಿಸುವ ಮೂಲಕ ಹೋರಾಟವನ್ನು ಹತ್ತಿಕ್ಕಲಾಯಿತು. ದೇಶದ ಜನತೆ ಭಯದ ಮನಸ್ಥಿತಿಯಲ್ಲಿ ಬದುಕಬೇಕಾಯಿತು.
ಕಾರ್ಯಕ್ರಮದಲ್ಲಿ ಹಲವಾರು ಬಿಜೆಪಿ ಮುಖಂಡರು ಮಾತನಾಡಿದರು. ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
PublicNext
26/06/2025 07:29 am