", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/378325-1750929372-12.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಎಲ್. ಟಿ 1 ರಲ್ಲಿ ಪ್ರತಿ ವರ್ಷ ಮಣ್ಣೆತ್ತಿನ ಅಮಾವಾಸ್ಯೆಯಂದು ದುರ್ಗಾದೇವಿ ಜಾತ್ರಾ ಮಹೋತ್ಸ...Read more" } ", "keywords": "Vijayapura Durga Devi Jatra Mahotsav, Durga Devi festival celebration, Vijayapura news, cultural event, religious festival. ", "url": "https://dashboard.publicnext.com/node" }
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಎಲ್. ಟಿ 1 ರಲ್ಲಿ ಪ್ರತಿ ವರ್ಷ ಮಣ್ಣೆತ್ತಿನ ಅಮಾವಾಸ್ಯೆಯಂದು ದುರ್ಗಾದೇವಿ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ಎರಡು ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಜನಪ್ರತಿನಿಧಿಗಳು ಸೇರಿದಂತೆ ಅನ್ಯರಾಜ್ಯದ ಪ್ರಭಾವಿ ನಾಯಕರು ಇಲ್ಲಿಗೆ ಆಗಮಿಸಿ ದೇವಿಯ ದರ್ಶನ ಪಡೆಯುವುದು ವಿಶೇಷ.
ಇನ್ನೂ ಇಲ್ಲಿಗೆ ಬಂದ ರಾಜಕಾರಣಿಗಳು ಏನೇ ಬೇಡಿಕೊಂಡರೂ ಅವರ ಇಷ್ಟಾರ್ಥ ಇಡೇರಿ ರಾಜಕಾರಣದಲ್ಲಿ ಮತ್ತಷ್ಟು ಉತ್ತುಂಗಕ್ಕೆ ಏರುತ್ತಾರೆ ಎಂಬುದು ರಾಜಕಾರಣಿಗಳ ನಂಬಿಕೆ.
ಈ ವರ್ಷ ಮಹಾರಾಷ್ಟ್ರದ ಸಚಿವ ಸಂಜಯ್ ರಾಠೋಡ, ಕಲಬುರ್ಗಿ ಮಾಜಿ ಸಂಸದ ಉಮೇಶ ಜಾಧವ್, ಸೇರಿದಂತೆ ಗೋವಾ ಮಹಾರಾಷ್ಟ್ರ ರಾಜ್ಯದ ರಾಜಕಾರಣಿಗಳು ಭಾಗಿಯಾಗಿದ್ದರು.
ವಿಜಯಪುರ ಸಂಸದ ರಮೇಶ ಜಿಗಜಿಣಗಿ ತಮ್ಮ ಭಾಷಣದಲ್ಲಿ ರಾಜಕೀಯವಾಗಿ ಬೆಳೆಯಲು ನನ್ನ ಜೀವನದಲ್ಲೂ ಒಂದು ಪವಾಡವೇ ನಡೆದಿದೆ. ದೇವಿ ಜಾತ್ರೆಯಲ್ಲಿ ಭಾಗಿಯಾಗಿರೋದು ನನ್ನ ಸೌಭಾಗ್ಯ ಎಂದರು.
ಇನ್ನೂ ಎರಡುವರೆ ಸಾವಿರ ಜನಸಂಖ್ಯೆ ಇರುವ ಈ ಸೋಮದೇವರಹಟ್ಟಿ ತಾಂಡಾದಲ್ಲಿರುವ ಈ ದೇವಾಲಯಕ್ಕೆ ಹಿಂದೆ ಮಾಜಿ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ ಪಾಟೀಲ್ ಅವರು ಬಂದು ಹೋಗಿದ್ದಾರೆ. ಅದೇ ತರಹ ಇಲ್ಲಿಯವರೆಗೆ ಸಾಕಷ್ಟು ಜನ ರಾಜಕಾರಣಿಗಳು ಇಲ್ಲಿಗೆ ಬಂದು ಹರಕೆ ಹೊತ್ತುಕೊಂಡು ಹೋಗುತ್ತಾರೆ. ಅದರಲ್ಲೂ ಮಾಜಿ ಪ್ರಧಾನಿ ಹೆಚ್. ಡಿ. ದೇವೆಗೌಡ, ಸುಶೀಲ ಕುಮಾರ ಶಿಂಧೆ, ದಿವಂಗತ. ಅಂಬರೀಷ, ಗೋಪಿನಾಥ ಮುಂಡೆ, ಸಂಜಯ ಪಾಟೀಲ ಸೇರಿದಂತೆ ಹಲವು ಜನ ಐಪಿಎಸ್, ಐಐಎಸ್ ಅಧಿಕಾರಿಗಳು ಸಹಿತ ಇಲ್ಲಿಗೆ ಬಂದು ಹೋಗಿದ್ದಾರೆ.
ಇನ್ನೂ ದೇವಿಯ ಮಹಿಮೆಯ ಕಾರಣ ಭಕ್ತಾದಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ದೇವಿಯ ಶಕ್ತಿಯೇ ಇದಕ್ಕೆ ಕಾರಣ ಎನ್ನುವುದು ಇಲ್ಲಿನ ಜನರ ನಂಬಿಕೆಯಾಗಿದೆ.
ಮಂಜು ಕಲಾಲ ಪಬ್ಲಿಕ ನೆಕ್ಸ್ಟ ವಿಜಯಪುರ
PublicNext
26/06/2025 02:46 pm