", "articleSection": "Infrastructure,News,LadiesCorner,Religion", "image": { "@type": "ImageObject", "url": "https://prod.cdn.publicnext.com/s3fs-public/421698-1750929778-Youtube-HD.00_14_37_16.Still2457~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಪೋಷಣ ಅಭಿಯಾನದ ಸಮುದಾಯ ಆಧಾರಿತ ಚಟುವಟಿಕೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿ...Read more" } ", "keywords": "ಧಾರವಾಡ: ಗರ್ಭಿಣಿಯರಿಗೆ ಆರತಿ ಬೆಳಗಿದ ಡಿಸಿ ದಿವ್ಯ ಪ್ರಭು", "url": "https://dashboard.publicnext.com/node" }
ಧಾರವಾಡ: ಪೋಷಣ ಅಭಿಯಾನದ ಸಮುದಾಯ ಆಧಾರಿತ ಚಟುವಟಿಕೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ರಾಜೀವಗಾಂಧಿ ನಗರದ ಸಮುದಾಯ ಭವನದಲ್ಲಿ ಪೌಷ್ಟಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಗರ್ಭಿಣಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಜಿಲ್ಲೆಯಾದ್ಯಂತ ಈ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಧಾರವಾಡದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಗರ್ಭಿಣಿಯರಿಗೆ ಉಡಿ ತುಂಬಿ ಆರತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗರ್ಭಿಣಿಯರು ಯಾವೆಲ್ಲ ಪೌಷ್ಟಿಕ ಆಹಾರ ಸೇವಿಸಬೇಕು? ಅವರು ಅನುಸರಿಸಬೇಕಾದ ಆರೋಗ್ಯ ಕ್ರಮಗಳೇನು? ಎಂಬೆಲ್ಲ ಮಾಹಿತಿಯನ್ನು ಈ ಕಾರ್ಯಕ್ರಮದ ಮೂಲಕ ತಿಳಿಸಿಕೊಡಲಾಯಿತು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಗರ್ಭಿಣಿಯರಿಗೆ ಉಡಿ ತುಂಬಿ ಆರತಿ ಬೆಳಗಿದ್ದು ಇಲ್ಲಿ ವಿಶೇಷವಾಗಿತ್ತು.
ಜಿಲ್ಲಾ ಪಂಚಾಯ್ತಿ ಸಿಇಓ ಭುವನೇಶ ಪಾಟೀಲ, ಡಿಎಚ್ಓ ಡಾ.ಎಸ್.ಎಂ.ಹೊನಕೇರಿ ಸೇರಿದಂತೆ ಇತರರು ಈ ಸಂದರ್ಭದಲ್ಲಿದ್ದರು.
Kshetra Samachara
26/06/2025 02:53 pm