", "articleSection": "Infrastructure,Education,Government", "image": { "@type": "ImageObject", "url": "https://prod.cdn.publicnext.com/s3fs-public/229640-1750937498-hblop.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Mallesh Suranagi" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳು ಕಳೆದಿವೆ. ದೇಶ ಆರ್ಥಿಕ, ತಂತ್ರಜ್ಞಾನದಲ್ಲಿ ಸಾಕಷ್ಟು ಸಾಧನೆ ಮಾಡಿದೆ. ಹೀಗಿದ್ದರೂ ಸ್...Read more" } ", "keywords": "Hubballi bus issue, village without bus, student transport problem, rural transport woes, Hubballi village demands bus, student future at risk.", "url": "https://dashboard.publicnext.com/node" }
ಹುಬ್ಬಳ್ಳಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳು ಕಳೆದಿವೆ. ದೇಶ ಆರ್ಥಿಕ, ತಂತ್ರಜ್ಞಾನದಲ್ಲಿ ಸಾಕಷ್ಟು ಸಾಧನೆ ಮಾಡಿದೆ. ಹೀಗಿದ್ದರೂ ಸ್ವಾತಂತ್ರ್ಯ ಸಿಕ್ಕು 78 ವರ್ಷ ಕಳೆದರೂ ಇಲ್ಲೊಂದು ಗ್ರಾಮಕ್ಕೆ ಬಸ್ ವ್ಯವಸ್ಥೆಯೇ ಇಲ್ಲವಾಗಿದೆ. ಅಷ್ಟಕ್ಕೂ ಯಾವುದು ಆ ಗ್ರಾಮ..? ಏನಿದು ಸಮಸ್ಯೆ ಅಂತೀರಾ ತೋರಸ್ತಿವಿ ನೋಡಿ..
ಅಮೃತ ಮಹೋತ್ಸವ ಆಚರಣೆ ಮಾಡಿ ದೇಶಕ್ಕೆ ದೇಶವೇ ಸಂಭ್ರಮಿಸಿ ಈಗ 78 ವರ್ಷ ಕೂಡ ಕಳೆದಿದೆ. ಹೀಗಿದ್ದರೂ ಹುಬ್ಬಳ್ಳಿ ತಾಲೂಕಿನ ರಾಮಾಪೂರಕ್ಕೆ ಮಾತ್ರ ಬಸ್ಸಿನ ವ್ಯವಸ್ಥೆಯೇ ಇಲ್ಲ. 4G, 5G ಕಾಲದಲ್ಲಿಯೂ ಕೂಡ ಕಾಲು ನಡಿಗೆಯಲ್ಲಿಯೇ ಓಡಾಡುವಂತಾಗಿದೆ. ಹೌದು.. ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತಂದಿದ್ದು, ಸಾರಿಗೆ ವ್ಯವಸ್ಥೆ ಇಲ್ಲದ್ದರಿಂದ ಏಳನೇ ತರಗತಿವರೆಗೆ ಮಾತ್ರ ಮಕ್ಕಳ ವಿದ್ಯಾಭ್ಯಾಸ ಮಾಡುವಂತಾಗಿದೆ. ಹುಬ್ಬಳ್ಳಿ ತಾಲೂಕಿನ ರಾಮಾಪುರ ಗ್ರಾಮದ ವಿದ್ಯಾರ್ಥಿಗಳ ಕಷ್ಟಗಳನ್ನ ಕೇಳುವವರಿಲ್ಲ ಯಾರು...? ಎಂಬುವಂತಾಗಿದ್ದು, ನಿಜಕ್ಕೂ ಚಿಂತಾಜನಕ ಸಂಗತಿಯಾಗಿದೆ. ನಮಗೆ ಆಸ್ತಿ ಬೇಡ, ಹಣ ಬೇಡ ವಿದ್ಯಾಭ್ಯಾಸಕ್ಕಾಗಿ ನಮ್ಮ ಗ್ರಾಮಕ್ಕೆ ಒಂದು ಬಸ್ ಬಿಡಿ ಎನ್ನುತ್ತಿರುವ ಮಕ್ಕಳ ಮಾತನ್ನು ಕೂಡ ಯಾರು ಕೇಳಿಸಿಕೊಳ್ಳುತ್ತಿಲ್ಲ.
ಇನ್ನೂ ರಾಮಾಪುರ ಗ್ರಾಮದಿಂದ ಮಿಶ್ರಿಕೋಟಿ ಗ್ರಾಮದ ಹೈಸ್ಕೂಲ್ಗೆ ತೆರಳಿಲಿರುವ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಬಸ್ ಇಲ್ಲದ ಕಾರಣ ಮಳೆ ಚಳಿಯಲ್ಲಿಯೇ ನಡೆದುಕೊಂಡು ಶಾಲೆಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ನಡೆದುಕೊಂಡು ಹೋಗಬೇಕಾಗಿದ್ದರಿಂದ ಏಳನೇ ತರಗತಿವರೆಗೆ ಮಾತ್ರ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳು ಪರಿಸ್ಥಿತಿ ಹೇಳ ತೀರದಾಗಿದೆ. ಶಾಲೆಗೆ ಹೋಗಲು ಒಂದು ಬಸ್ ಬಿಡಿ ಎಂದು ಅಂಗಲಾಚುತ್ತಿರುವ ವಿದ್ಯಾರ್ಥಿಗಳು ಗೋಳು ಜನಪ್ರತಿನಿಧಿಗಳಿಗೆ ಕೇಳಿಸದಂತಾಗಿದೆ. ಸಾಕ್ಷರತೆ ಮಟ್ಟವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಸಾಕಷ್ಟು ಸರ್ಕಸ್ ಮಾಡುತ್ತಿದೆ. ಆದರೆ ಇಲ್ಲಿ ಓದಬೇಕೆಂಬ ಮಕ್ಕಳ ಕನಸ್ಸಿಗೆ ಬಸ್ಸಿನ ವ್ಯವಸ್ಥೆ ಇಲ್ಲದಿರುವುದು ತಣ್ಣೀರು ಎರಚಿದಂತಾಗಿದೆ.
ಒಟ್ಟಿನಲ್ಲಿ ಓದುವ ಮಕ್ಕಳಿಗೆ ಮಾತ್ರವಲ್ಲದೇ ಊರಿನ ಜನರಿಗೆ ಏನಾದರೂ ಸಮಸ್ಯೆ ಉಂಟಾದರೇ ದೇವರೆ ಗತಿ ಎಂಬುವಂತಾಗಿದೆ. ಹೀಗಿದ್ದರೂ ಯಾರೊಬ್ಬರೂ ಈ ಬಗ್ಗೆ ಕಾಳಜಿ ವಹಿಸದೇ ಇರುವುದು ನಿಜಕ್ಕೂ ಇದೇನಾ..? ಅಭಿವೃದ್ಧಿ ಎಂಬುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಬಸ್ ಹಾಗೂ ಮೂಲಸೌಕರ್ಯದ ವ್ಯವಸ್ಥೆ ಕಲ್ಪಿಸುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ.
ಮಲ್ಲೇಶ್ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/06/2025 05:01 pm