", "articleSection": "Crime,Nature", "image": { "@type": "ImageObject", "url": "https://prod.cdn.publicnext.com/s3fs-public/235762-1750937906-Untitled-design---2025-06-26T170821.885.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Channaveera Sagaranal" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲ...Read more" } ", "keywords": "5 tigers death, Chamarajanagar, tiger poisoning case, wildlife crime, tiger conservation, forest department investigation, wildlife news, tiger deaths in India, Chamarajanagar forest, wildlife poisoning ", "url": "https://dashboard.publicnext.com/node" } ಚಾಮರಾಜನಗರ: ಒಂದೇ ದಿನ 5 ಹುಲಿಗಳ ಸಾವು - ವಿಷಪ್ರಾಶನದ ಶಂಕೆ!!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ಒಂದೇ ದಿನ 5 ಹುಲಿಗಳ ಸಾವು - ವಿಷಪ್ರಾಶನದ ಶಂಕೆ!!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸೇರಿದಂತೆ ಒಂದೇ ದಿನ ಒಟ್ಟು ಐದು ಹುಲಿಗಳು ಸಾವನ್ನಪ್ಪಿದ್ದು, ವಿಷಪ್ರಾಸನದ ಶಂಕೆ ವ್ಯಕ್ತವಾಗಿದೆ.

ಮೊದಲಿಗೆ ನಾಲ್ಕು ಹುಲಿಗಳ ಮೃತದೇಹ ಬುಧವಾರ ಬೆಳಗ್ಗೆ ಪತ್ತೆಯಾಗಿದ್ದು, ಬಳಿಕ ಮತ್ತೊಂದು ಹುಲಿಯ ಕಳೇಬರ ಪತ್ತೆಯಾಗಿದೆ! ಮೇಲ್ನೋಟಕ್ಕೆ ವಿಷಪ್ರಾಶನದಿಂದ ಹುಲಿಗಳು ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಇನ್ನು, ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಸಿಬ್ಬಂದಿ ವರ್ಗ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮತ್ತೊಂದೆಡೆ, ಒಂದೇ ದಿನ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಸೇರಿ ಐದು ಹುಲಿಗಳು ಅಸಹಜ ಸಾವಿಗೀಡಾಗಿರುವುದಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಮರುಕ ವ್ಯಕ್ತಪಡಿಸಿದ್ದು, ಪ್ರಕರಣದ ತನಿಖೆಗೆ ಪಿಸಿಸಿಎಫ್ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ನಡೆಸಬೇಕು ಎಂದಿದ್ದಾರೆ.

ಘಟನೆಗೆ ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯವಿದ್ದರೆ ಅವರ ವಿರುದ್ಧ ಅಥಾವಾ ವಿದ್ಯುತ್ ಸ್ಪರ್ಶ, ವಿಷಪ್ರಾಶನದಿಂದ ಮೃತಪಟ್ಟಿದ್ದರೆ ಅದಕ್ಕೆ ಕಾರಣರಾಗಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಹಾಗೂ ಮೂರು ದಿನಗಳ ಒಳಗೆ ತನಿಖಾ ವರದಿ ಸಲ್ಲಿಸಬೇಕು ಎಂದು ಸಚವರು ಆದೇಶ ನೀಡಿದ್ದಾರೆ ಎಂದು "ಪಬ್ಲಿಕ್ ನೆಕ್ಸ್ಟ್" ಗೆ ಮೂಲಗಳು ತಿಳಿಸಿವೆ.

Edited By : Nagaraj Tulugeri
PublicNext

PublicNext

26/06/2025 05:08 pm

Cinque Terre

16.94 K

Cinque Terre

1

ಸಂಬಂಧಿತ ಸುದ್ದಿ