", "articleSection": "Health & Fitness", "image": { "@type": "ImageObject", "url": "https://prod.cdn.publicnext.com/s3fs-public/286525-1750989027-WhatsApp-Image-2025-06-27-at-7.20.16-AM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarChikkaballapur" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಬಳ್ಳಾಪುರ: ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೇ ಹಾಳು ಮಾಡಿಕೊಳ್ಳುತ್ತಿದ್...Read more" } ", "keywords": "Chikkaballapur, drug abuse, substance addiction, youth problems, life destruction, health issues, government initiatives, awareness programs, rehabilitation centers, Assistant Drug Controller, district health department.", "url": "https://dashboard.publicnext.com/node" } ಚಿಕ್ಕಬಳ್ಳಾಪುರ: "ಮಾದಕ ವಸ್ತು ಸೇವನೆಯಿಂದ ಜೀವನ ಹಾಳು, ಬರೀ ಗೋಳು"
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: "ಮಾದಕ ವಸ್ತು ಸೇವನೆಯಿಂದ ಜೀವನ ಹಾಳು, ಬರೀ ಗೋಳು"

ಚಿಕ್ಕಬಳ್ಳಾಪುರ: ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾನೆ ಹಾಗೂ ಆರ್ಥಿಕವಾಗಿ ದಿವಾಳಿ ಆಗುತ್ತಿದ್ದಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ ಎಂದು ದಿಬ್ಬೂರಹಳ್ಳಿ ಸಬ್ ಇನ್ಸ್‌ಪೆಕ್ಟರ್ ಶ್ಯಾಮಲಾ ತಿಳಿಸಿದರು.

ದಿಬ್ಬೂರಹಳ್ಳಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿಗಳ ಮೂಲಕ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಪ್ರಯುಕ್ತ ಅರಿವು ಮೂಡಿಸಿದರು.

ವಿಶ್ವದಾದ್ಯಂತ ಈ ದುಶ್ಚಟಕ್ಕೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಣೆ ಕಾನೂನು ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಡ್ರಗ್‌ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ, ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ.

ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕ ವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.

ದಿಬ್ಬೂರಹಳ್ಳಿ ವೃತ್ತದಲ್ಲಿ ಬಶೆಟ್ಟಹಳ್ಳಿಯ ಶ್ರೀ ಸಾಯಿ ಇಂಟರ್ ನ್ಯಾಶನಲ್ ಸ್ಕೂಲ್ ಮತ್ತು ದಿಬ್ಬೂರಹಳ್ಳಿಯ ಎಸ್ ಎಂವಿ ಕಾನ್ವೆಂಟ್ ನ ಶಾಲಾ ಮಕ್ಕಳಿಗೆ ಹಾಗೂ ಸ್ಥಳೀಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಸ್ಲಗ್: ಡ್ರಗ್ಸ್ ಮಾಫಿಯಾ ಹತೋಟಿಗೆ ಸಹಕರಿಸಿ

-ವರದಿ: ಚಿಕ್ಕತೇಕಹಳ್ಳಿ ಡಿ. ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್

Edited By : Shivu K
PublicNext

PublicNext

27/06/2025 07:21 am

Cinque Terre

20.8 K

Cinque Terre

0