", "articleSection": "Education", "image": { "@type": "ImageObject", "url": "https://prod.cdn.publicnext.com/s3fs-public/463655-1750997563-manjunath---2025-06-27T094110.694.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ನವಲಗುಂದ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳುವುದು ಅತೀ ಅವಶ್ಯವಾಗಿದೆ ಹಾಗೂ ಕಲಿಕೆಯ ಜೊ...Read more" } ", "keywords": ""Dedication, hard work, continuous learning, success formula, Mahantesh Nidavani, educational inspiration, self-improvement, personal growth, achievement motivation" ", "url": "https://dashboard.publicnext.com/node" }
ನವಲಗುಂದ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳುವುದು ಅತೀ ಅವಶ್ಯವಾಗಿದೆ ಹಾಗೂ ಕಲಿಕೆಯ ಜೊತೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಪ್ರಮುಖವಾಗಿದೆ. ವಿದ್ಯಾರ್ಥಿಗಳು ಶ್ರದ್ಧೆ, ಸಮಯ ಪಾಲನೆ, ಪರಿಶ್ರಮ ವಹಿಸಿ ನಿರಂತರ ಅಧ್ಯಯನದ ಮೂಲಕ ಯಶಸ್ಸನ್ನು ಗಳಿಸಬಹುದು ಎಂದು ಸ್ಥಳೀಯ ಶ್ರೀ ಶಂಕರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ ಅಂತಿಮ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ ಹಾಗೂ ಚಿಕ್ಕೋಡಿ ಪುರಸಭೆಯ ಮುಖ್ಯಾಧಿಕಾರಿಗಳಾದ ಶ್ರೀ ಮಹಾಂತೇಶ ನಿಡವಣಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಮಾತು ಹೇಳಿದರು.
ಕಾರ್ಯಕ್ರಮದ ಆರಂಭದಲ್ಲಿ ಕು. ಪೂಜಾ ತೆಗ್ಗಿನಕೇರಿ ಹಾಗೂ ಸಂಗಡಿಗರಿಂದ ಪ್ರಾರ್ಥನೆ, ಸಾಂಸ್ಕೃತಿಕ ವಿಭಾಗದ ಡಾ. ಎಂ. ಎನ್. ಹಾರೋಗೇರಿ ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗಣಕಯಂತ್ರ ವಿಭಾಗದ ನಿರ್ದೇಶಕರಾದ ಶ್ರೀ ಮಹೇಶ ಕುರ್ತಕೋಟಿ ಇವರು ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷರು ಹಾಗೂ ಕ್ರೀಡಾ ವಿಭಾಗದ ನಿರ್ದೇಶಕರಾದ ಡಾ. ಎ. ಜಿ. ಜಕ್ಕನಗೌಡ್ರ ವಾರ್ಷಿಕ ವರದಿಯನ್ನು ವಾಚಿಸಿದರು. ನಂತರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದ ಹಾಗೂ ವಿಶ್ವವಿದ್ಯಾಲಯ ಬ್ಲೂ ಆಟಗಾರರನ್ನು. ರಾಷ್ಟ್ರ ಮತ್ತು ರಾಜ್ಯಮಟ್ಟದ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಿದ ಎನ್. ಎಸ್. ಎಸ್ , ಎನ್. ಸಿ. ಸಿ, ಸ್ಕೌಟ್ & ಗೈಡ್ಸ್ ಸ್ವಯಂ ಸೇವಕರನ್ನು ಭಾಜನರಾದ ಹಲವಾರು ವಿದ್ಯಾರ್ಥಿಗಳನ್ನು ಪ್ರಶಸ್ತಿ, ಪಾರಿತೋಷಕ ಹಾಗೂ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಡಾ. ಶೀಲಾ ತುಬಚಿ ಪ್ರಾಧ್ಯಾಪಕರ ಪರವಾಗಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳ ಪರವಾಗಿ ಮಹೇಶ ಯಲಬುರ್ಗಿ, ಅಕ್ಷತಾ ನೇಕಾರ, ಪ್ರಶಾಂತ ಮಡಿವಾಳರ, ಬಸಮ್ಮ ಬ್ಯಾಳಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಡಾ. ಆರ್. ಎಸ್. ಹಿರೇಮಠ ಹಾಗೂ ಡಾ. ಜಿ. ಎಸ್. ಚಿಣಗಿ ಬಹುಮಾನ ಕಾರ್ಯಕ್ರಮ ನಿರ್ವಹಿಸಿದರು. ಪ್ರಾಚಾರ್ಯರಾದ ಡಾ. ಎಸ್. ವಿ. ಬಡಿಗೇರ ತಮ್ಮ ಅಧ್ಯಕ್ಷೀಯ ಸಮಾರೋಪದಲ್ಲಿ ವಿದ್ಯಾರ್ಥಿಗಳು ತಾವು ಕಂಡ ಉಜ್ವಲ ಭವಿಷ್ಯದ ಕನಸುಗಳು ಸಾಕಾರಗೊಳ್ಳಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಎನ್. ಸಿ. ಸಿ. ಅಧಿಕಾರಿ ಡಾ. ಆರ್. ಪಿ. ಚವ್ಹಾಣ ವಂದಿಸಿದರು. ವೇದಿಕೆಯ ಮೇಲೆ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಜೆ. ಪಿ. ಲಮಾಣಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿಗಳಾದ ಡಾ. ಪಿ. ಜಿ. ಕೊಪ್ಪದ, ಡಾ. ಆರ್ ಎಂ. ಸರ್ವದೆ, ಶ್ರೀ ಎಂ.ವಿ. ಹೊಳೆಯಣ್ಣವರ, ವಿಜಯಲಕ್ಷ್ಮಿ, ಭರತ್, ಶಿವರಾಜ್, ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶ್ರೀಮತಿ ಅಕ್ಕಮ್ಮ ಯಮನೂರು ನಿರ್ವಹಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Kshetra Samachara
27/06/2025 09:42 am