ಕುಂದಗೋಳ : ರೈತಾಪಿ ಜನರ ಪ್ರಸ್ತುತ ವರ್ಷದ ತಮ್ಮ ಜಮೀನಲ್ಲಿನ ಬೆಳೆಯನ್ನು ಬೆಳೆ ಸಮೀಕ್ಷೆ ಅಪ್ಲಿಕೇಶನ್ ಮೂಲಕ ನೋಂದಾಯಿಸಿಕೊಳ್ಳಲು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮಾಹಿತಿ ನೀಡಿದೆ.
ಹೌದು ! 2025 -26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಆ್ಯಪ್ ಈಗಾಗಲೇ ಬಿಡುಗಡೆ ಮಾಡಿದ್ದು, ಕುಂದಗೋಳ ತಾಲೂಕಿನ ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಬೆಳೆ ಸಮೀಕ್ಷೆ ಆ್ಯಪ್'ನಲ್ಲಿ ನೊಂದಾಯಿಸಲು ಕೃಷಿ ಸಹಾಯಕ ನಿರ್ದೇಶಕರು ಸೂಚಿಸಿದ್ದಾರೆ.
ಸರ್ಕಾರದ ವಿವಿಧ ಯೋಜನೆಗಳಾದ ಫಸಲ ಭೀಮಾ ಯೋಜನೆ, ಬೆಳೆ ಪರಿಹಾರ, ಬೆಂಬಲ ಬೆಲೆ ಯೋಜನೆಗಳ ಸೌಲಭ್ಯವನ್ನು ಪಡೆಯಲು ಬೆಳೆ ಸಮೀಕ್ಷೆ ಮಾಡುವುದು ಅವಶ್ಯಕವಾಗಿರುತ್ತದೆ. ಬೆಳೆ ವಿಮೆ ಮಾಡಿಸಿದ ರೈತರು ಕಡ್ಡಾಯವಾಗಿ ತಾವು ಬೆಳೆದ ಬೆಳೆಯನ್ನು ಬೆಳೆ ಸಮೀಕ್ಷೆಯಡಿ ನೋಂದಾಯಿಸಬೇಕು. ಬೆಳೆ ಸಮೀಕ್ಷೆ ಆ್ಯಪ್'ನ್ನು ಗೂಗಲ್ ಪ್ಲೇ ಸ್ಟೋರ್'ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಲಾಗಿದೆ.
ಮುಂಗಾರು ಬೆಳೆ ಸಮೀಕ್ಷೆ 2025 ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡುವ ಮೂಲಕ ಬೆಳೆ ಸಮೀಕ್ಷೆ ಮಾಡಬಹುದು ಹಾಗೂ ಖಾಸಗಿ ನಿವಾಸಿಗಳನ್ನು ಸಂಪರ್ಕಿಸಿ ಖಾಸಗಿ ನಿವಾಸಿ ಬೆಳೆ ಆ್ಯಪ್ ಮೂಲಕ ಬೆಳೆ ಸಮೀಕ್ಷೆಯನ್ನು ಮಾಡಿಸಬಹುದು ಎಂಬ ಸಲಹೆ ನೀಡಿದ್ದಾರೆ.
Kshetra Samachara
27/06/2025 10:25 am