", "articleSection": "Government,News,Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/399529_1751018165_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ನಾಡಪ್ರಭು ಕೆಂಪೇಗೌಡರ ದೂರದೃಷ್ಠಿ, ಆಡಳಿತ ವ್ಯವಸ್ಥೆಗೆ ಮಾದರಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು. ನಗ...Read more" } ", "keywords": "Chitradurga, Kempegowda, visionary, administrative model, DC Kumaraswamy. ", "url": "https://dashboard.publicnext.com/node" } ಚಿತ್ರದುರ್ಗ: ಕೆಂಪೇಗೌಡರ ದೂರದೃಷ್ಟಿ ಆಡಳಿತ ವ್ಯವಸ್ಥೆಗೆ ಮಾದರಿ- ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಕೆಂಪೇಗೌಡರ ದೂರದೃಷ್ಟಿ ಆಡಳಿತ ವ್ಯವಸ್ಥೆಗೆ ಮಾದರಿ- ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

ಚಿತ್ರದುರ್ಗ: ನಾಡಪ್ರಭು ಕೆಂಪೇಗೌಡರ ದೂರದೃಷ್ಠಿ, ಆಡಳಿತ ವ್ಯವಸ್ಥೆಗೆ ಮಾದರಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಸಮಾರಂಭದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಕೆಂಪೇಗೌಡರು ಕೇವಲ ನಾಡಪ್ರಭು ಮಾತ್ರವಲ್ಲದೇ ಧರ್ಮಪ್ರಭುವೂ ಆಗಿದ್ದರು. ದೂರದೃಷ್ಠಿಯ ನಾಯಕ, ಅಪೂರ್ವ ಕನಸುಗಾರ, ಸಮರ್ಥ ಆಡಳಿತಗಾರರಾಗಿದ್ದ ಅವರು ಬೆಂಗಳೂರು ಜಾಗತಿಕ ನಗರವಾಗುವಲ್ಲಿ ಮೂಲ ಕಾರಣಕರ್ತರಾಗಿದ್ದಾರೆ ಎಂದರು.

ಬೆಂಗಳೂರು ಎಲ್ಲ ಧರ್ಮಗಳಿಗೆ, ಎಲ್ಲ ಭಾಷಿಕರಿಗೆ ಸುರಕ್ಷಿತ ಸ್ಥಳ. ಹಾಗಾಗಿ ಬೆಂಗಳೂರು ಶೈಕ್ಷಣಿಕ, ಔದ್ಯೋಗಿಕ, ಆರೋಗ್ಯ ಸೇರಿದಂತೆ ಎಲ್ಲ ವಲಯಗಳಲ್ಲಿಯೂ ತನ್ನದೇಯಾದ ಛಾಪು ಮೂಡಿಸಿದ್ದು, ಜಗತ್ತಿಗೆ ಸಿಲಿಕ್ಯಾನ್ ವ್ಯಾಲಿಯಾಗಿದೆ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್ ಮಾತನಾಡಿ, ಬೆಂಗಳೂರು ಜಾಗತೀಕ ಮಟ್ಟದಲ್ಲಿ ಗಮನ ಸೆಳೆದಿದ್ದು, ಐಟಿ ಬಿಟಿ ಕಂಪನಿಗಳಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಕೆಂಪೇಗೌಡರು ವೃತ್ತಿಯ ಹೆಸರಿನಲ್ಲಿ ವಿವಿಧ ಪೇಟೆಗಳನ್ನು ನಿರ್ಮಿಸಿದ್ದರು. ಈ ಪೇಟೆಗಳೆಲ್ಲವೂ ಪ್ರಸ್ತುತ ಇಂಡಸ್ಟ್ರೀಯಲ್ ಏರಿಯಾಗಳಾಗಿವೆ ಎಂದು ತಿಳಿಸಿದ ಅವರು, ಮಹಾ ಪುರುಷರ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೇ ಎಲ್ಲ ಸಮುದಾಯದವರು ಸೇರಿ ಆಚರಣೆ ಮಾಡಬೇಕು. ಇಂದಿನ ಯುವ ಪೀಳಿಗೆ ಮಹನೀಯರ ವಿಚಾರಧಾರೆಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

27/06/2025 03:26 pm

Cinque Terre

3.1 K

Cinque Terre

0

ಸಂಬಂಧಿತ ಸುದ್ದಿ