", "articleSection": "Education", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/113572_1751019225_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "8971147028" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ: ಕ್ರೈಸ್ತ ಸಮುದಾಯದ ಮಕ್ಕಳು ಹೆಚ್ಚು ಹೆಚ್ಚು ಸರಕಾರಿ ಹುದ್ದೆಗಳನ್ನು ಪಡೆಯುವತ್ತ ಗಮನ ಹರಿಸಿದಾಗ ಸಮುದಾಯದ ಜೊತೆಗೆ ಜಿಲ್ಲೆಗೆ ಕೂಡ ಗೌರವ ...Read more" } ", "keywords": "Udupi, UPSC success, Shreyansh Gomes, 372nd rank, Catholic Diocese honors. ", "url": "https://dashboard.publicnext.com/node" }
ಉಡುಪಿ: ಕ್ರೈಸ್ತ ಸಮುದಾಯದ ಮಕ್ಕಳು ಹೆಚ್ಚು ಹೆಚ್ಚು ಸರಕಾರಿ ಹುದ್ದೆಗಳನ್ನು ಪಡೆಯುವತ್ತ ಗಮನ ಹರಿಸಿದಾಗ ಸಮುದಾಯದ ಜೊತೆಗೆ ಜಿಲ್ಲೆಗೆ ಕೂಡ ಗೌರವ ತಂದು ಕೊಟ್ಟಂತೆ ಆಗುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಅವರು ತಮ್ಮ ನಿವಾಸದ ಕಚೇರಿಯಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ 372 ನೇ ರ್ಯಾಂಕ್ ಪಡೆದು ಸಾಧನೆ ತೋರಿದ ಉಡುಪಿ ಚರ್ಚಿನ ಶ್ರೇಯಾಂಸ್ ಗೋಮ್ಸ್ ಅವರನ್ನು ಧರ್ಮಪ್ರಾಂತ್ಯದ ಪರವಾಗಿ ಗೌರವಿಸಿ ಮಾತನಾಡಿದರು.
ಧರ್ಮಪ್ರಾಂತ್ಯದಲ್ಲಿ ಕನಿಷ್ಠ 25 ಮಂದಿ ಮಕ್ಕಳು ಸರಕಾರದ ಅತ್ಯುನ್ನತ ಹುದ್ದೆಗಳನ್ನು ಪಡೆಯಬೇಕು ಎಂಬ ಗುರಿ ಹೊಂದಲಾಗಿತ್ತು. ಅದರಲ್ಲಿ ಪೂರ್ಣ ಪ್ರಮಾಣದ ಯಶಸ್ಸು ದೊರೆಯದೇ ಹೋದರೂ ಸ್ವಲ್ಪ ಪ್ರಮಾಣದಲ್ಲಿ ಸಮುದಾಯದ ಮಕ್ಕಳು ಸಾಧನೆ ಮಾಡಿರುವುದು ಸಮಾಧಾನಕರ ಸಂಗತಿಯಾಗಿದೆ. ಯುಪಿಎಸ್ಸಿ ಪರೀಕ್ಷೆಗೆ ಮೌನವಾಗಿ ತಯಾರಿಯನ್ನು ನಡೆಸಿಕೊಂಡು ಉತ್ತಮ ಸಾಧನೆ ತೋರಿರುವ ಶ್ರೇಯಾಂಸ್ ಪ್ರತಿಯೊಬ್ಬರಿಗೂ ಮಾದರಿಯಾಗಿದ್ದಾರೆ ಎಂದರು.
ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ, ಶ್ರೇಯಾಂಶ್ ಅವರ ಹೆತ್ತವರಾದ ಎಸ್ ಜೆ ಗೋಮ್ಸ್ ಮತ್ತು ಮೇಬಲ್ ಶಾಂತಿ, ಧರ್ಮಪ್ರಾಂತ್ಯದ ಉಜ್ವಾಡ್ ಪತ್ರಿಕೆಯ ಸಂಪಾದಕರಾದ ವಂ|ಆಲ್ವಿನ್ ಸ್ವಿಕ್ವೇರಾ, ಮಾಧ್ಯಮ ಸಂಯೋಜಕ ಮೈಕಲ್ ರೋಡ್ರಿಗಸ್ ಉಪಸ್ಥಿತರಿದ್ದರು.
Kshetra Samachara
27/06/2025 03:43 pm