", "articleSection": "Lifestyle,Health & Fitness,Nature", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/431249_1751019500_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PraveenKarawar" }, "editor": { "@type": "Person", "name": "9964135886" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಸಿ: ತಾಲೂಕಿನ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ಯುವಕನೊಬ್ಬ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ವಿಪತ್ತು ಪ್...Read more" } ", "keywords": "Shivamogga, Jog Falls, young man missing, NDRF search operation. ", "url": "https://dashboard.publicnext.com/node" }
ಶಿರಸಿ: ತಾಲೂಕಿನ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ಯುವಕನೊಬ್ಬ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯುವ ಪಡೆ (NDRF) ತಂಡ ಶೋಧ ಕಾರ್ಯಾಚರಣೆಗೆ ಅರಂಭಿಸಿದೆ.
ನಾಲ್ಕು ದಿನಗಳ ಹಿಂದೆ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪ ನಿವಾಸಿ ಪವನ್ ಎಂಬ ಯುವಕ ತನ್ನ ಸ್ನೇಹಿತ ವಾಸುದೇವ್ ಜೊತೆ ಜೋಗನ ಹಕ್ಕಲು ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿತ್ತು. ಹಳ್ಳವೊಂದನ್ನು ದಾಟುವಾಗ ಪವನ್ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ ಎನ್ನಲಾಗಿದೆ.
ಘಟನೆಯ ಬಳಿಕ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಆದರೆ ಜಲಪಾತದಲ್ಲಿ ಹೆಚ್ಚು ನೀರು ಹರಿಯುತ್ತಿರುವ ಕಾರಣದಿಂದ ಶೋಧ ಕಾರ್ಯದಲ್ಲಿ ಅಡಚಣೆ ಉಂಟಾಗಿದ್ದು, ಪರಿಣಾಮವಾಗಿ ವಿಶೇಷ ತರಬೇತಿ ಪಡೆದ NDRF ತಂಡವನ್ನು ಸ್ಥಳಕ್ಕೆ ಕರೆಯಲಾಗಿದೆ.
ಪ್ರಸ್ತುತ, NDRF ತಂಡದ 28 ಸದಸ್ಯರ ತಂಡ ಪವನ್ ನ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಸ್ಥಳೀಯರು ಕೂಡ ಸಹಕರಿಸುತ್ತಿದ್ದು, ಶೀಘ್ರದಲ್ಲೇ ನಿರೀಕ್ಷಿತ ಫಲಿತಾಂಶ ದೊರೆಯುವ ನಿರೀಕ್ಷೆಯಿದೆ.
PublicNext
27/06/2025 03:48 pm