", "articleSection": "Human Stories", "image": { "@type": "ImageObject", "url": "https://prod.cdn.publicnext.com/s3fs-public/421698-1751096251-Youtube-HD.00_57_01_03.Still2506~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarChikkaballapur" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿಡ್ಲಘಟ್ಟ : ಇಡೀ ಜಗತ್ತಿನಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರ ನಮ್ಮ ಬೆಂಗಳೂರು. ಅಂತಹ ನಗರವನ್ನು ನಿರ್ಮಿಸಿದ ನಾಡಪ್ರಭು ಕೆಂಪೇಗೌಡರ ತತ್ವ...Read more" } ", "keywords": "ಚಿಕ್ಕಬಳ್ಳಾಪುರ: "ನಾಡಪ್ರಭು ಕೆಂಪೇಗೌಡರ ತತ್ವಾದರ್ಶ ಇಂದಿನ ಪ್ರತಿ ರಾಜಕಾರಣಿ, ಅಧಿಕಾರಿಗಳಿಗೆ ದಾರಿದೀಪ" ", "url": "https://dashboard.publicnext.com/node" }
ಶಿಡ್ಲಘಟ್ಟ : ಇಡೀ ಜಗತ್ತಿನಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರ ನಮ್ಮ ಬೆಂಗಳೂರು. ಅಂತಹ ನಗರವನ್ನು ನಿರ್ಮಿಸಿದ ನಾಡಪ್ರಭು ಕೆಂಪೇಗೌಡರ ತತ್ವ- ಆದರ್ಶಗಳನ್ನು ಇಂದಿನ ಪ್ರತಿ ರಾಜಕಾರಣಿ ಹಾಗೂ ಸರ್ಕಾರಿ ಅಧಿಕಾರಿಗಳು ಪಾಲಿಸಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.
ತಾಲೂಕಿನ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ನಾಡಪ್ರಭು ಕೆಂಪೇಗೌಡರು ಆಡಳಿತ ಕೌಶಲ್ಯ, ಸಾಮಾಜಿಕ ಸಾಮರಸ್ಯ ಮತ್ತು ಭವಿಷ್ಯದ ದೃಷ್ಟಿಕೋನದಲ್ಲಿ ಇಡೀ ಜಗತ್ತಿಗೆ ಮಾದರಿಯಾದ ಮಹಾಪುರುಷರು. ಸುಮಾರು 1450 ಕೆರೆಗಳು, 13 ಪೇಟೆಗಳ ವಿನ್ಯಾಸ ರೂಪಿಸಿದ ಅವರು ಎಲ್ಲಾ ಸಮುದಾಯಗಳ ಪರವಾಗಿ ಕೆಲಸ ಮಾಡಿದ ಶ್ರೇಷ್ಠ ನಾಯಕ ಎಂದು ಹೇಳಿದರು.
ತಾಲ್ಲೂಕು ಮಟ್ಟದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ನಾಡಪ್ರಭು ಕೆಂಪೇಗೌಡರ ಜೀವನ ಮತ್ತು ಸಾಧನೆಯ ಕುರಿತು ಅರಿವು ಮೂಡಿಸುವ ಪುಸ್ತಕಗಳನ್ನು ನೆನಪಿನ ಕಾಣಿಕೆಯ ಮೂಲಕ ವಿತರಿಸಲಾಯಿತು. ತಹಶೀಲ್ದಾರ್ ಗಗನ ಸಿಂಧು ಎನ್., ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
28/06/2025 01:07 pm