", "articleSection": "Infrastructure,Health & Fitness,WaterPower,News", "image": { "@type": "ImageObject", "url": "https://prod.cdn.publicnext.com/s3fs-public/421698-1751106444-Youtube-HD.00_44_14_08.Still2513~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Santosh Kaupu" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಾಪು: ಮಜೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸುತ್ತಮುತ್ತಲಿನ ಹಲವು ಮನೆಗಳ ಬಾವಿಯ ನೀರು ಕಲುಷಿತಗೊಂಡಿದ್ದು ಗ್ರಾಮಸ್ಥರು ಆತಂಕಿತರಾಗಿದ್ದಾರೆ....Read more" } ", "keywords": "Kapu well water polluted, contaminated well water Kapu, villagers concerned foul smell, Kapu drinking water contamination, foul odor in well water Kapu, Kapu villagers anxious, polluted water source Kapu, Kapu water quality issues, well water health risk Kapu, Kapu rural water problem", "url": "https://dashboard.publicnext.com/node" }
ಕಾಪು: ಮಜೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸುತ್ತಮುತ್ತಲಿನ ಹಲವು ಮನೆಗಳ ಬಾವಿಯ ನೀರು ಕಲುಷಿತಗೊಂಡಿದ್ದು ಗ್ರಾಮಸ್ಥರು ಆತಂಕಿತರಾಗಿದ್ದಾರೆ.
ಕಲುಷಿತಗೊಂಡಿರುವ ನೀರು ಕುಡಿಯುವುದಕ್ಕೆ ಮಾತ್ರವಲ್ಲದೇ ದಿನಬಳಕೆಗೆ ಬಳಸುವುದೂ ಕಷ್ಟಸಾಧ್ಯವೆಂಬಂತಾಗಿದೆ. ಹಾಗಾಗಿ ಎಲ್ಲಾ ಮನೆಯವರೂ ಪಕ್ಕದಲ್ಲೇ ಇರುವ ಬಾವಿಯ ನೀರನ್ನು ಕುಡಿಯುವುದಕ್ಕೆ ಮತ್ತು ಗ್ರಾಮ ಪಂಚಾಯತ್ ನೀಡುವ ನಲ್ಲಿ ನೀರನ್ನು ಇತರ ಕೆಲಸಗಳಿಗೆ ಪರ್ಯಾಯವಾಗಿ ಬಳಸಿಕೊಳ್ಳುತ್ತಿದ್ದಾರೆ.
ಬಾವಿ ನೀರು ಕಲುಷಿತಗೊಂಡಿರುವ ಬಗ್ಗೆ ಗ್ರಾಮ ಪಂಚಾಯತ್ ಮತ್ತು ಆರೋಗ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗ್ರಾಮ ಪಂಚಾಯತಿ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಎರಡೆರಡು ಬಾರಿ ಭೇಟಿ ನೀಡಿ, ನೀರನ್ನು ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ನೀರಿನ ಮಾದರಿಯನ್ನು ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ.
ಈ ನಡುವೆಯ ಕೆಲ ಮನೆಯವರು ಉಡುಪಿಯ ಖಾಸಗಿ ಪ್ರಯೋಗಾಲಯದಲ್ಲಿ ನೀರಿನ ಮಾದರಿಯನ್ನು ಪರೀಕ್ಷೆಗಾಗಿ ನೀಡಿದ್ದಾರೆ. ಅದರಲ್ಲಿ ಸೂಕ್ಷ್ಮಾಣು ಜೀವಿಗಳು ಮತ್ತು ಅಮೋನಿಯಾ ಅಂಶ ಹೆಚ್ಚಾಗಿರುವುದು ದೃಢಪಟ್ಟಿದೆ. ಆದರೆ ಈ ಪರಿಸ್ಥಿತಿ ಯಾಕಾಗಿ ನಿರ್ಮಾಣವಾಗಿದೆ ಎನ್ನುವುದು ಸ್ಥಳೀಯರಿಗೆ ಇನ್ನೂ ತಿಳಿದು ಬಂದಿಲ್ಲ.
ಬಾವಿಯ ನೀರನ್ನು ಪರೀಕ್ಷೆಗಾಗಿ ರವಾನಿಸಲಾಗಿದ್ದು ಸಮಸ್ಯೆಯ ಮೂಲವನ್ನು ಪತ್ತೆ ಹಚ್ಚಿ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಾಗುವುದು ಎಂದು ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
PublicNext
28/06/2025 03:57 pm