", "articleSection": "Politics,Government,News", "image": { "@type": "ImageObject", "url": "https://prod.cdn.publicnext.com/s3fs-public/421698-1751108772-Youtube-HD.00_47_10_02.Still2514~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನಂಜನಗೂಡು: ಸರ್ಕಾರಕ್ಕೆ ತೆರಿಗೆ ಹಣವನ್ನು ಪಾವತಿಸದೆ ವಂಚಿಸಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಧ...Read more" } ", "keywords": "Nanjangud tax fraud, government tax evasion Nanjangud, protest against tax fraud Nanjangud, Nanjangud protest July 2, tax money fraud Nanjangud, Nanjangud government revenue loss, protest against tax evasion, Nanjangud public protest, July 2 protest Nanjangud, Nanjangud financial crime", "url": "https://dashboard.publicnext.com/node" } ನಂಜನಗೂಡು: ಸರ್ಕಾರಕ್ಕೆ ತೆರಿಗೆ ಹಣ ವಂಚನೆ - ಜುಲೈ 2ಕ್ಕೆ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ಸರ್ಕಾರಕ್ಕೆ ತೆರಿಗೆ ಹಣ ವಂಚನೆ - ಜುಲೈ 2ಕ್ಕೆ ಪ್ರತಿಭಟನೆ

ನಂಜನಗೂಡು: ಸರ್ಕಾರಕ್ಕೆ ತೆರಿಗೆ ಹಣವನ್ನು ಪಾವತಿಸದೆ ವಂಚಿಸಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧ ಜುಲೈ 2ರಂದು ಅಂಬೇಡ್ಕರ್ ಸೇನೆಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಅಂಬೇಡ್ಕರ್ ಸೇನೆಯ ಮೈಸೂರು ಜಿಲ್ಲಾಧ್ಯಕ್ಷ ಬಸವಟ್ಟಿಗೆ ನಾಗೇಂದ್ರ ಹೇಳಿದ್ದಾರೆ.

ನಂಜನಗೂಡಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾಗೇಂದ್ರ ಅವರು, ಬದನವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ವನಜಾ ಕಾಂಕ್ರೀಟ್ ಪ್ರಾಡಕ್ಟ್ ಕಂಪನಿಯ ಮಾಲೀಕರು ಕಾನೂನು ಉಲ್ಲಂಘನೆ ಮಾಡಿ ಪರವಾನಿಗೆ ನವೀಕರಿಸದೆ ಕಂಪನಿಯನ್ನು ನಡೆಸಿಕೊಂಡು ಬಂದಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯಿತಿಗೆ ತೆರಿಗೆ ಹಣವನ್ನು ಕಟ್ಟದೆ ವಂಚಿಸಲಾಗಿದೆ. ಹೆಡತಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ವೆ ನಂಬರ್ 394,79,279/3 ರಲ್ಲಿ ಎರಡು ಎಕರೆ ಜಮೀನಿನು ಭೂ ಪರಿವರ್ತನೆ ಮಂಜುರಾಗಿದ್ದು, 2016 ರವರೆಗೆ ತೆರಿಗೆ ಹಣವನ್ನು ಪಾವತಿಸಲಾಗಿದೆ. ಇನ್ನುಳಿದ ವರ್ಷದಲ್ಲಿ ಯಾವುದೇ ತೆರಿಗೆಯನ್ನು ಪಾವತಿ ಮಾಡಿಲ್ಲ. ಕಟ್ಟಡ ಲೈಸೆನ್ಸ್, ನಕ್ಷೆ, ಅನುಮೋದನೆ ಪಡೆಯದೆ ಕಟ್ಟಡಗಳನ್ನು ನಿರ್ಮಿಸಿ ಕಲ್ಯಾಣ ಮಂಟಪವನ್ನು ತೆರೆದು ಅಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವಾಸದ ಮನೆಗಳನ್ನು ಕಟ್ಟಿಕೊಟ್ಟಿದ್ದಾರೆ. ಇದಕ್ಕೆ ಯಾವುದೇ ತೆರಿಗೆಯನ್ನು ನೀಡಿಲ್ಲ ಎಂದರು.

ಹೆಡತಲೆ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಲ್ಲಿ ನಡೆದಿರುವ ಕಾಮಗಾರಿಗಳು ಅಕ್ರಮವಾಗಿವೆ. ಎರಡು ಮೂರು ವರ್ಷಗಳ ಹಿಂದೆ ನಡೆದಿರುವ ಕೆಲಸ ಕಾರ್ಯಗಳಿಗೆ ಹಣವನ್ನು ಮತ್ತೆ ಜಮೆ ಮಾಡುತ್ತಿದ್ದಾರೆ. ಹಾಗೆಯೇ ಈ ಹಿಂದೆ ಕೂಲಿ ಕೆಲಸ ಮಾಡಿದವರನ್ನು ಬಿಟ್ಟು ಬೇರೆ ಮಧ್ಯವರ್ತಿಗಳ ಹೆಸರಿಗೆ ಹಣವನ್ನು ಹಾಕುತ್ತಿದ್ದಾರೆ. ದೇವನೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಸುರಗಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಲೀಕರು ತೆರಿಗೆಯನ್ನು ಪಾವತಿಸದೆ ವಂಚಿಸಿದ್ದಾರೆ. ತೆರಿಗೆ ಭ್ರಷ್ಟಾಚಾರದಲ್ಲಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಕಷ್ಟು ಬಾರಿ ಸಂಬಂಧ ಪಟ್ಟ ಮೇಲಾಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಜುಲೈ 2ರಂದು ನಂಜನಗೂಡು ತಾಲ್ಲೂಕು ಪಂಚಾಯಿತಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಬರುವ ತನಕ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಎಂದು ತಿಳಿಸಿದರು.

Edited By : Suman K
Kshetra Samachara

Kshetra Samachara

28/06/2025 04:36 pm

Cinque Terre

4.98 K

Cinque Terre

0

ಸಂಬಂಧಿತ ಸುದ್ದಿ