", "articleSection": "Government,Accident", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1751110478_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೊಪ್ಪ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು ಇಂದು ಮುಂಜಾನೆ ಕಂದಕಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸ...Read more" } ", "keywords": "Kopp Road Accidents: potholes cause frequent accidents", "url": "https://dashboard.publicnext.com/node" }
ಕೊಪ್ಪ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು ಇಂದು ಮುಂಜಾನೆ ಕಂದಕಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೀಗೋಡು ಬಳಿ ಸಂಭವಿಸಿತ್ತು. ಪರಿಣಾಮ ಬಸ್ಸಿನಲ್ಲಿದ್ದ ಮೂವರು ಪ್ರವಾಸಿಗರು ಗಾಯಗೊಂಡಿದ್ದರು.
ಆದರೆ ಈ ಅಪಘಾತಕ್ಕೆ ರಸ್ತೆ ಗುಂಡಿಗಳೇ ಕಾರಣ ಎಂದು ಇದೀಗ ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ರಸ್ತೆ ದೊಡ್ಡ ಗುಂಡಿಗಳಿದ್ದು ಚಾಲಕ ತಿಳಿಯದೇ ಗುಂಡಿ ಹಾರಿಸಿರುವ ಪರಿಣಾಮ ಸ್ಟೇರಿಂಗ್ ರಾಡ್ ತುಂಡಾಗಿ ಬಸ್ ಕಂದಕ್ಕೆ ಪಲ್ಟಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ರಸ್ತೆ ಗುಂಡಿಗಳನ್ನ ಮುಚ್ಚುವಂತೆ ಹಲವು ಭಾರೀ ಮನವಿ ಮಾಡಿದ್ರು ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮೂಲದ ಖಾಸಗಿ ಕಂಪನಿಯ 17 ಜನ ಸ್ನೇಹಿತರು ಪ್ರವಾಸಕ್ಕೆಂದು ಆಗುಂಬೆ ಕಡೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಕಾರ್ತಿಕ್, ಮಧು ಹಾಗೂ ಚೈತ್ರ ಎಂಬ ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
PublicNext
28/06/2025 05:04 pm