", "articleSection": "International", "image": { "@type": "ImageObject", "url": "https://prod.cdn.publicnext.com/s3fs-public/463655-1751117328-manjunath---2025-06-28T183204.695.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಿಶನ್‌ಗಂಗಾ ಜಲವಿದ್ಯುತ್ ಯೋಜನೆ ಕುರಿತಂತೆ ಹೇಗ್‌ನಲ್ಲಿರುವ ಶಾಶ್ವತ ಮಧ್ಯಸ್ಥಿಕೆ ನ್ಯಾಯಾಲಯ ನೀಡಿದ ತೀರ...Read more" } ", "keywords": "India has strongly rejected the "supplemental award" issued by the Permanent Court of Arbitration (PCA) regarding the Kishenganga and Ratle hydroelectric projects in Jammu and Kashmir.", "url": "https://dashboard.publicnext.com/node" } ಜಮ್ಮು-ಕಾಶ್ಮೀರ ಜಲವಿದ್ಯುತ್ ಯೋಜನೆ: ಶಾಶ್ವತ ನ್ಯಾಯಾಲಯದ ತೀರ್ಪಿಗೆ ಭಾರತ ತಿರುಗೇಟು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಮ್ಮು-ಕಾಶ್ಮೀರ ಜಲವಿದ್ಯುತ್ ಯೋಜನೆ: ಶಾಶ್ವತ ನ್ಯಾಯಾಲಯದ ತೀರ್ಪಿಗೆ ಭಾರತ ತಿರುಗೇಟು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಿಶನ್‌ಗಂಗಾ ಜಲವಿದ್ಯುತ್ ಯೋಜನೆ ಕುರಿತಂತೆ ಹೇಗ್‌ನಲ್ಲಿರುವ ಶಾಶ್ವತ ಮಧ್ಯಸ್ಥಿಕೆ ನ್ಯಾಯಾಲಯ ನೀಡಿದ ತೀರ್ಪನ್ನು ಪಾಕಿಸ್ತಾನ ಹರ್ಷದಿಂದ ಸ್ವಾಗತಿಸಿದೆ. ಆದರೆ ಈ ತೀರ್ಪಿಗೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಭಾರತ–ಪಾಕಿಸ್ತಾನ ನಡುವಿನ 1960ರ ನದಿ ನೀರು ಹಂಚಿಕೆಯ ಮಧ್ಯಸ್ಥಿಕೆ ವಿಚಾರವಾಗಿ ಸ್ಥಾಪಿತವಾಗಿದ್ದ ಈ ನ್ಯಾಯಮಂಡಳಿಯ ತೀರ್ಪನ್ನು ಭಾರತ "ಅನಧಿಕೃತ ಮತ್ತು ಅಮಾನ್ಯ" ಎಂದು ಖಂಡಿಸಿದೆ. ಈ ನ್ಯಾಯಾಲಯಕ್ಕೆ ಯಾವುದೇ ಸಾಂವಿಧಾನಿಕ ಅಥವಾ ಒಪ್ಪಂದಬದ್ಧ ಮಾನ್ಯತೆ ನೀಡಿಲ್ಲವೆಂದು ಭಾರತ ಸರಕಾರ ಸ್ಪಷ್ಟಪಡಿಸಿದೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ನದಿ ನೀರು ಹಂಚಿಕೆಯ ಬಗ್ಗೆ ಯಾವುದಾದರೂ ಪ್ರಕರಣ ದಾಖಲಾದರೆ ಅದನ್ನು ವಿಚಾರಣೆ ನಡೆಸುವ ಅಧಿಕಾರ ಮಾತ್ರ ಈ ನ್ಯಾಯಾಲಯಕ್ಕಿದೆ. ನದಿ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ನಿರ್ಧರಿಸುವ ಯಾವ ಅಧಿಕಾರವೂ ಈ ನ್ಯಾಯಾಲಯಕ್ಕಿಲ್ಲ. ಪಾಕಿಸ್ತಾನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೂ ಸಿಂಧೂ ಜಲ ಒಪ್ಪಂದವನ್ನು ರದ್ದುಪಡಿಸುವುದು ಖಚಿತ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಭಾರತ ಎಪ್ರಿಲ್‌ನಲ್ಲಿ ಸಿಂಧೂ ಜಲ ಒಪ್ಪಂದವನ್ನ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಂಡಿದ್ದು, ಅದು ಈ ವಿವಾದದ ಬಗ್ಗೆ ತನ್ನ ಸಾಮರ್ಥವನ್ನು ಮಿತಿಗೊಳಿಸುವುದಿಲ್ಲ ಮತ್ತು ಅದರ ತೀರ್ಪು ಪಕ್ಷಗಳ ಮೇಲೆ ಬದ್ಧವಾಗಿದೆ ಎಂದು ಮಧ್ಯಸ್ಥಿಕೆ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿದೆ. ಈ ತೀರ್ಪನ್ನ ಪಾಕಿಸ್ತಾನ " ಪ್ರಮುಖ ಕಾನೂನು ಗೆಲುವು ಎಂದು ಕರೆದರೆ ಭಾರತವು ಏಕಪಕ್ಷೀಯವಾಗಿ ಒಪ್ಪಂದವನ್ನ ಅಮಾನತುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

Edited By :
PublicNext

PublicNext

28/06/2025 06:58 pm

Cinque Terre

38.4 K

Cinque Terre

0

ಸಂಬಂಧಿತ ಸುದ್ದಿ