", "articleSection": "Cultural Activity,Government", "image": { "@type": "ImageObject", "url": "https://prod.cdn.publicnext.com/s3fs-public/38659820250628071759filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "9844461373" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತುಮಕೂರು : ಪರಿಸರ ನಾಶವಾದರೆ ನಮಗೆ ಉಳಿಗಾಲವಿಲ್ಲ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಭಾರತದ ಲೋಕಪಾಲ್ ನ್ಯಾ...Read more" } ", "keywords": "Tumkur Environmental Concerns: Justice L. Narayanaswamy's statement", "url": "https://dashboard.publicnext.com/node" }
ತುಮಕೂರು : ಪರಿಸರ ನಾಶವಾದರೆ ನಮಗೆ ಉಳಿಗಾಲವಿಲ್ಲ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಭಾರತದ ಲೋಕಪಾಲ್ ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಶನಿವಾರ ತುಮಕೂರು ತಾಲೂಕು ಬೆಳ್ಳಾವಿ ಹೋಬಳಿ ಬಳ್ಳಾಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಏರ್ಪಡಿಸಿದ್ದ ತಾಯಿಯ ಹೆಸರಿನಲ್ಲಿ ಒಂದು ಗಿಡ-ವನ ಮಹೋತ್ಸವ ಹಾಗೂ ಪರಿಸರ ಅರಿವು ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು. ಹಳೆಯ ತಲೆಮಾರಿನವರು ನೆಟ್ಟ ಮರಗಳ ನೆರಳಿನಲ್ಲಿ ನಾವಿಂದು ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಿದ್ದೇವೆ. ಈ ಗಿಡ-ಮರಗಳಿಂದ ಪ್ರಾಣಿ-ಪಕ್ಷಿಗಳಿಗೆ ಆಹಾರ ದೊರೆಯುತ್ತಿದೆ. ಜನವಸತಿ ಪ್ರದೇಶಗಳ ವಿಸ್ತರಣೆಗಾಗಿ ಸಕಲ ಜೀವರಾಶಿಗಳ ಬದುಕಿಗೆ ಆಸರೆಯಾಗಿರುವ ಮರಗಳನ್ನು ಕಡಿದು ಹಾಕುತ್ತಿರುವುದು ಶೋಚನೀಯ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ಉಪ ಲೋಕಾಯುಕ್ತ ಕೆ.ಎನ್. ಫಣಿಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ ಗಿಡ-ಮರಗಳನ್ನು ತಾಯಿಯಂತೆ ಪೋಷಿಸಿ ರಕ್ಷಿಸಬೇಕು. ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಒಂದೊಂದು ಗಿಡ ನೆಟ್ಟು ಪೋಷಿಸಬೇಕೆಂದು ಕರೆ ನೀಡಿದರು.
PublicNext
28/06/2025 07:18 pm