", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/38659820250628072244filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "9844461373" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತುಮಕೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ, ಎಲ್ಲಾ ಇಲಾಖೆಗಳಲ್ಲೂ ಲಂಚಗುಳಿತನ, ಭ್ರಷ್ಟಾಚಾರ ತುಂಬಿದೆ ಎಂದು ಆಪಾದಿಸಿ ಜಿಲ...Read more" } ", "keywords": "Tumkur JD(S) Protest: against Congress government", "url": "https://dashboard.publicnext.com/node" }
ತುಮಕೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ, ಎಲ್ಲಾ ಇಲಾಖೆಗಳಲ್ಲೂ ಲಂಚಗುಳಿತನ, ಭ್ರಷ್ಟಾಚಾರ ತುಂಬಿದೆ ಎಂದು ಆಪಾದಿಸಿ ಜಿಲ್ಲಾ ಜೆಡಿಎಸ್ ಮುಖಂಡರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ ನೇತೃತ್ವದಲ್ಲಿ ವಿವಿಧ ಘಟಕಗಳ ಮುಖಂಡರು ಜಿಲ್ಲಾ ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆಯಲ್ಲಿ ಆಗಮಿಸಿ, ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದರು.
ಈ ವೇಳೆ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದರೂ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ, ಎಲ್ಲಾ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ದಿನ ಬಳಕೆ ಪದಾರ್ಥಗಳ ಬೆಲೆ ವಿಪರೀತ ಏರಿಕೆಯಾಗಿ ಜನಸಾಮಾನ್ಯರ ಬದುಕು ಆತಂಕಕಾರಿಯಾಗಿದೆ. ಸ್ವಜನ ಪಕ್ಷಪಾತಿಯಾದ ಕಾಂಗ್ರೆಸ್ ಸರ್ಕಾರ ಜನರಹಿತ ಕಡೆಗಣಿಸಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ಹಿರಿಯ ಶಾಸಕರೇ ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಬಹಿರಂಗಗೊಳಿಸಿ ಸರ್ಕಾರ ದುರಾಡಳಿತವನ್ನು ಸಾರಿ ಹೇಳಿದ್ದಾರೆ. ಇಂತಹ ಜನ ವಿರೋಧಿ ಸರ್ಕಾರ ರಾಜ್ಯದ ಜನರ ಪಾಲಿಗೆ ದೊಡ್ಡ ಶಾಪವಾಗಿದೆ. ಆಡಳಿತ ನಿಭಾಯಿಸಲು ವಿಫಲರಾಗಿರುವ ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ನೀಡಿ ಸರ್ಕಾರವನ್ನು ವಿಸರ್ಜಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಮುಖಂಡರಾದ ಗುಬ್ಬಿಯ ನಾಗರಾಜು, ಕೆ.ಟಿ.ಶಾಂತಕುಮಾರ್, ಎಲ್ಲಾ ತಾಲ್ಲೂಕು ಘಟಕಗಳ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
PublicNext
28/06/2025 07:22 pm