", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1751120785_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು : ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾದ ಚಂದ್ರದ್ರೋಣ ಪರ್ವತ ಶ್ರೇಣಿಯ ಕವಿಕಲ್ ಗಂಡಿ ಬಳಿ ಕಾರು ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿ...Read more" } ", "keywords": "Chikkamagaluru Car Accident: car and jeep collision causes traffic jam", "url": "https://dashboard.publicnext.com/node" }
ಚಿಕ್ಕಮಗಳೂರು : ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾದ ಚಂದ್ರದ್ರೋಣ ಪರ್ವತ ಶ್ರೇಣಿಯ ಕವಿಕಲ್ ಗಂಡಿ ಬಳಿ ಕಾರು ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಇಂದು ಸಂಜೆ ನಡೆದಿದೆ.
ಬೆಂಗಳೂರು ನೊಂದಣಿ ಹೊಂದಿರುವ ಜೀಪ್ ಹಾಗೂ ಗುಜರಾತ್ ನೊಂದಣಿಯ ಕಾರಿನ ನಡುವೆ ನಡೆದ ಅಪಘಾತದಿಂದಾಗಿ ರಸ್ತೆಯಲ್ಲಿ ಭಾರೀ ವಾಹನ ದಟ್ಟಣೆ ಉಂಟಾಗಿ ಪ್ರವಾಸಿಗರು ತೊಂದರೆ ಅನುಭವಿಸಿದರು. ವಾರಾಂತ್ಯವಾದ ಕಾರಣ ಸಹಜವಾಗಿ ಸಾವಿರಾರು ಪ್ರವಾಸಿಗರು ಗಿರಿಪ್ರದೇಶಕ್ಕೆ ಆಗಮಿಸಿದ್ದರಿಂದ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತು.
ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದು ಅವರಿಗೆ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಾಹನ ದಟ್ಟಣೆ ಸರಿಪಡಿಸಲು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಪ್ರವಾಸಿ ಮಿತ್ರರು ಸ್ಥಳಕ್ಕೆ ಧಾವಿಸಿ ಹತೋಟಿಗೆ ತರಲು ಹರಸಾಹಸಪಟ್ಟರು.
ಜಿಲ್ಲೆಯಲ್ಲಿ ನಿರಂತರವಾಗಿ ಅಪಘಾತಗಳ ಮುಂದುವರೆದಿದ್ದು ಪ್ರವಾಸಿ ವಾಹನಗಳೇ ಹೆಚ್ಚಾಗಿ ಅಪಘಾತಕ್ಕೆ ಒಳಗಾಗುತ್ತಿವೆ ಹೀಗಾಗಿ ಹೊರ ಜಿಲ್ಲೆಗಳಿಂದ ಆಗಮಿಸುವವರು ಎಚ್ಚರಿಕೆಯ ಚಾಲನೆ ಮಾಡಬೇಕಿದೆ.
PublicNext
28/06/2025 07:56 pm