", "articleSection": "Law and Order,Government", "image": { "@type": "ImageObject", "url": "https://prod.cdn.publicnext.com/s3fs-public/11357220250628083220filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "8971147028" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹೆಬ್ರಿ : ತಾಲೂಕಿನ ಸಿದ್ದಾಪುರ-ಹೆಬ್ರಿ ರಾಜ್ಯ ಹೆದ್ದಾರಿ ಕುಚೂರು ಕೆಂಚಾರ್ಕಳ ಪ್ರದೇಶದಲ್ಲಿ ಅತಿಯಾದ ಮಳೆಯಿಂದ ಹಾನಿಗೊಂಡ ರಸ್ತೆ ಹಾಗೂ ಮೋರಿಯನ್...Read more" } ", "keywords": "Siddapura-Hebri Road Closure: district collector's order", "url": "https://dashboard.publicnext.com/node" }
ಹೆಬ್ರಿ : ತಾಲೂಕಿನ ಸಿದ್ದಾಪುರ-ಹೆಬ್ರಿ ರಾಜ್ಯ ಹೆದ್ದಾರಿ ಕುಚೂರು ಕೆಂಚಾರ್ಕಳ ಪ್ರದೇಶದಲ್ಲಿ ಅತಿಯಾದ ಮಳೆಯಿಂದ ಹಾನಿಗೊಂಡ ರಸ್ತೆ ಹಾಗೂ ಮೋರಿಯನ್ನು ರಕ್ಷಣಾ ತಡೆಗೋಡೆಯೊಂದಿಗೆ ಪುನರ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 28 ರಿಂದ ಜುಲೈ 30 ರ ವರೆಗೆ ಸಿದ್ದಾಪುರ-ಹೆಬ್ರಿ (ಹೆಬ್ರಿ-ಕುಚೂರು-ಕಂಚಾರ್ಕಳ- ಮಾಂಡಿ ಮೂರಕೈ) ಮೂಲಕ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಜಿಲ್ಲಾಧಿಕಾರಿ ಸ್ವರೂಪ ಟಿ. ಆದೇಶಿಸಿದ್ದಾರೆ.
ಕಾಮಗಾರಿ ನಡೆಯುವ ತನಕ ಸಿದ್ದಾಪುರದಿಂದ ಹೆಬ್ರಿಗೆ ಬರುವವರಿಗೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಮಾಡಲಾಗಿದ್ದು ಅದರಂತೆ ಸಿದ್ದಾಪುರದಿಂದ ಹೆಬ್ರಿ ಕಡೆಗೆ ಬರುವವರು ಗ್ರಾಮೀಣ ರಸ್ತೆಯಾದ ಮಾಂಡಿಮೂರುಕೈ-ಮೀನುಗದ್ದೆ-ಬೇಳಂಜೆ-ಕುಚೂರು ಮಾರ್ಗ ಬಳಸಿ ಹೆಬ್ರಿಯನ್ನು ತಲುಪಬಹುದಾಗಿದೆ. ಅದರಂತೆ ಹೆಬ್ರಿಯಿಂದ ಸಿದ್ದಾಪುರ ಕಡೆಗೆ ತೆರಳುವವರೂ ಇದೇ ಮಾರ್ಗವನ್ನು ಬಳಸುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
PublicNext
28/06/2025 08:32 pm