", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/405356-1751128757-maddya.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ: ಯಾವುದೇ ಪಕ್ಷದ ಸರ್ಕಾರ ಇರಲಿ, ಆಡಳಿತಾವಧಿಯ ಕೊನೆ ವರ್ಷ ರಾಜಕೀಯವಾಗಿ ತೀವ್ರ ಚಟುವಟಿಕೆಗಳು ನಡೆಯುತ್ತವೆ. ಆದರೆ, ರಾಜ್ಯ ಸರ್ಕಾರದ ದುರಾ...Read more" } ", "keywords": "Haveri, CM Siddaramaiah, former CM Bommai, Karnataka politics.", "url": "https://dashboard.publicnext.com/node" }
ಹಾವೇರಿ: ಯಾವುದೇ ಪಕ್ಷದ ಸರ್ಕಾರ ಇರಲಿ, ಆಡಳಿತಾವಧಿಯ ಕೊನೆ ವರ್ಷ ರಾಜಕೀಯವಾಗಿ ತೀವ್ರ ಚಟುವಟಿಕೆಗಳು ನಡೆಯುತ್ತವೆ. ಆದರೆ, ರಾಜ್ಯ ಸರ್ಕಾರದ ದುರಾಡಳಿತ ಹಾಗೂ ಜನ ವಿರೋಧಿ ನೀತಿ ಕಾರಣ ಈಗಲೇ ಅಸ್ಥಿರತೆ ಕಾಣ್ತಾ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಲ್ಲಿ ಮಾತನಾಡಿದ ಅವರು
ಎರಡೇ ವರ್ಷಗಳಲ್ಲಿ ಅಸ್ಥಿರತೆ ಬಂದಿದೆ ತಿಳಿಸಿದರು.
ರಾಜ್ಯದಲ್ಲಿನ ಈ ಗೊಂದಲದ ಫಲಶ್ರುತಿಯಾಗಿ 2026ರಲ್ಲಿ ಕರ್ನಾಟಕಕ್ಕೆ ಮಧ್ಯಂತರ ಚುನಾವಣೆ ಬರೋ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದರು. ಯಾವಾಗ ಚುನಾವಣೆ ಬಂದರೂ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ ಎಂದರು.
ರಾಜ್ಯದಲ್ಲಿ ಸಾಮೂಹಿಕ ಅತ್ಯಾಚಾರದಿಂದ ಹಿಡಿದು ಕೊಲೆ- ಸುಲಿಗೆ ಸಾಮಾನ್ಯವಾಗಿದೆ. ಸಿಕ್ಕ ಸಿಕ್ಕಲ್ಲಿ ಡ್ರಗ್ಸ್ ಮಾರುತ್ತಾ ಇದ್ದಾರೆ.
ದಿನನಿತ್ಯದ ಕೊಲೆ- ಸುಲಿಗೆ ಕಾಣ್ತಾ ಇಲ್ಲವಾ ಇವರಿಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರನ್ನು ಮೊದಲಿನಿಂದಲೂ ನೋಡುತ್ತಿದ್ದೇನೆ. ಕಳೆದ 5 ವರ್ಷ ಸಿಎಂ ಆದಾಗ ನೋಡಿದ್ದೇನೆ. ಸಿದ್ದರಾಮಯ್ಯ ಇಷ್ಟು ಅಸಹಾಯಕರಾಗಿ ಇರೋದನ್ನು ನೋಡೇ ಇಲ್ಲ ಎಂದು ಬೊಮ್ಮಾಯಿ ತಿಳಿಸಿದರು.
PublicNext
28/06/2025 10:09 pm