", "articleSection": "Infrastructure,Nature", "image": { "@type": "ImageObject", "url": "https://prod.cdn.publicnext.com/s3fs-public/286525-1751165170-WhatsApp-Image-2025-06-29-at-8.15.46-AM-(1).jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಮುಂದುವರಿದ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿ ಕೇಂದ್ರದ ...Read more" } ", "keywords": "Shivamogga office leakage, administrative issues, public grievances, government office problems, Karnataka news, citizen dashboard, grievance redressal.", "url": "https://dashboard.publicnext.com/node" }
ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಮುಂದುವರಿದ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿ ಕೇಂದ್ರದ ನಾಡ ಕಚೇರಿ ಮಳೆಗೆ ಸೋರುತಿದೆ.
ನಗರ ಹೋಬಳಿ ಕೇಂದ್ರದಲ್ಲಿ ಈಗಾಗಲೇ ಹೊಸ ನಾಡ ಕಚೇರಿಯನ್ನು ಅವೈಜ್ಞಾನಿಕವಾಗಿ ಕಟ್ಟಿರುವ ಹಿನ್ನೆಲೆಯಲ್ಲಿ ಕಟ್ಟಡದ ಸುತ್ತ ನೀರು ತುಂಬುವ ಕಾರಣ ಹಳೆ ಕಟ್ಟಡದಲ್ಲೇ ಕಾರ್ಯನಿರ್ವಹಿಸಲಾಗುತ್ತಿದೆ. ಆದರೇ ಮಳೆ ಹೆಚ್ಚಾಗಿರುವ ಕಾರಣದಿಂದ ಮಳೆ ನೀರು ಕಚೇರಿ ಒಳಗೆ ಸೋರುತ್ತಿದೆ. ಅಧಿಕಾರಿಗಳಿಗೆ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಕೊಡೆ ಹಿಡಿದು ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಾಡ ಕಚೇರಿಯ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಾಡ ಕಚೇರಿಯ ಗೋಳು ಕೇಳುವವರೇ ಇಲ್ಲದಂತಾಗಿದೆ. ಕಂಪ್ಯೂಟರ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಮಳೆಗೆ ಹಾನಿಯಾಗ್ತಿವೆ. ಇನ್ನು, ನಾಡಕಚೇರಿಗೆ ಹೊಗಲು ಸಾರ್ವಜನಿಕರು ಹರಸಾಹಸ ಪಡುವಂತಹ ವಾತಾವರಣ ಸೃಷ್ಟಿಯಾಗಿದೆ. ಹೊಸ ಕಚೇರಿ ಮುಂದೆ ಎರಡು ಅಡಿ ನೀರು ನಿಂತರೇ, ಹಳೆ ಕಚೇರಿಯಲ್ಲಿ ನೀರು ಸೋರುವುದು ನಿಂತಿಲ್ಲ. ಇನ್ನು ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಸಂಬಂಧಿತ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.
ಕಂಪ್ಯೂಟರ್ ಗಳಿಗೆ ಪ್ಲಾಸ್ಟಿಕ್ ಕವರ್ ಮುಚ್ಚಿ ಅಲ್ಲಿನ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
PublicNext
29/06/2025 08:16 am