", "articleSection": "Nature,Accident", "image": { "@type": "ImageObject", "url": "https://prod.cdn.publicnext.com/s3fs-public/387839-1751182550-WhatsApp-Image-2025-06-29-at-1.01.35-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಬಳಿ ಮೇಘಸ್ಫೋಟ ಸಂಭವಿಸಿ ಹಠಾತ್ ಪ್ರವಾಹ ಉಂಟಾದ ಪರಿಣಾಮ ನಿರ್ಮಾಣ ಹಂತದಲ್ಲಿದ್ದ ಹೋಟೆಲ್‌ನಲ್ಲಿ ಕೆಲಸ ಮಾ...Read more" } ", "keywords": "Uttarakhand, cloudburst, flash flood, 9 laborers missing, Gangotri pilgrimage disrupted. ", "url": "https://dashboard.publicnext.com/node" } ಉತ್ತರಾಖಂಡದಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ - 9 ಕಾರ್ಮಿಕರು ನಾಪತ್ತೆ, ಗಂಗೋತ್ರಿ ಯಾತ್ರೆ ತಡೆ!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತರಾಖಂಡದಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ - 9 ಕಾರ್ಮಿಕರು ನಾಪತ್ತೆ, ಗಂಗೋತ್ರಿ ಯಾತ್ರೆ ತಡೆ!

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಬಳಿ ಮೇಘಸ್ಫೋಟ ಸಂಭವಿಸಿ ಹಠಾತ್ ಪ್ರವಾಹ ಉಂಟಾದ ಪರಿಣಾಮ ನಿರ್ಮಾಣ ಹಂತದಲ್ಲಿದ್ದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ.

ಬಾರ್ಕೋಟ್–ಯಮುನೋತ್ರಿ ರಸ್ತೆ ಬಳಿ ಈ ಮೇಘಸ್ಫೋಟ ಸಂಭವಿಸಿದೆ. ಕಾರ್ಮಿಕರು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಮತ್ತೊಂದೆಡೆ, ಭಾರೀ ಮಳೆಗೆ ಕಾರಣವಾದ ಈ ಮೇಘಸ್ಫೋಟದ ಪರಿಣಾಮವಾಗಿ ಚಾರ್‌ಧಾಮ್ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗೂ ಬದ್ರಿನಾಥ ಯಾತ್ರೆಗಳನ್ನು ಸ್ಥಗಿತಗೊಳಿಸಲಾಗಿದೆ. ಯಮುನಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ.

ರೂದ್ರಪ್ರಯಾಗ ಜಿಲ್ಲೆಯ ಸೋನ್‌ಪ್ರಯಾಗ್-ಮುಂಕಟಿಯಾ ರಸ್ತೆಯನ್ನು ಮುಚ್ಚಲಾಗಿದ್ದು, ಕೇದಾರನಾಥಕ್ಕೆ ಹೋಗುವ ಮಾರ್ಗವನ್ನು ಸಹ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

Edited By : Abhishek Kamoji
PublicNext

PublicNext

29/06/2025 01:06 pm

Cinque Terre

107.11 K

Cinque Terre

0