", "articleSection": "Nature", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1751184039_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಎನ್.ಆರ್.ಪುರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ಈ ಬಾರಿ ಮೀನು ಶಿಕಾರಿ ಗಣನೀಯವಾಗಿ ಕಡಿಮೆಯಾಗಿದೆ. ಭದ್ರಾ ಹಿನ್...Read more" } ", "keywords": ""Heavy rainfall in Malenadu, fish catch decrease, monsoon challenges for fishermen, Chikkamagaluru district weather" ", "url": "https://dashboard.publicnext.com/node" } ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಅಬ್ಬರಕ್ಕೆ – ಮೀನು ಶಿಕಾರಿ ತೀವ್ರ ಕುಸಿತ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಅಬ್ಬರಕ್ಕೆ – ಮೀನು ಶಿಕಾರಿ ತೀವ್ರ ಕುಸಿತ

ಎನ್.ಆರ್.ಪುರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ಈ ಬಾರಿ ಮೀನು ಶಿಕಾರಿ ಗಣನೀಯವಾಗಿ ಕಡಿಮೆಯಾಗಿದೆ. ಭದ್ರಾ ಹಿನ್ನೀರಿನಲ್ಲಿ ಜಿಲೇಬಿ ಮೀನು ಮರಿ ಬಿಡುತ್ತಿರುವುದೇ ಇದರ ಪ್ರಮುಖ ಕಾರಣವೆಂದು ಮೀನು ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲೇಬಿ ಮರಿಗಳನ್ನು ಹೆಚ್ಚಾಗಿ ಬಿಡುವುದರಿಂದ ಗೌರಿ, ಕಟ್ಲಾ, ರವು ಮರಿಗಳನ್ನು ಭಕ್ಷಿಸುತ್ತವೆ ಹೀಗಾಗಿ ಬೇರೆ ಮೀನುಗಳು ಹೆಚ್ಚಾಗಿ ಸಿಗುತ್ತಿಲ್ಲ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಮಳೆಗಾಲದಲ್ಲಿ ಸಮುದ್ರದಲ್ಲಿ ಮೀನುಗಾರಿಕೆ ಸಂಪೂರ್ಣವಾಗಿ ಸ್ಥಗಿತವಾಗಿರುವುದರಿಂದ ಜನರು ನದಿ ಮೀನುಗಳನ್ನು ಅವಲಂಬಿಸುತ್ತಾರೆ. ಆದರೆ ಈ ಬಾರಿ ಮೀನುಗಳ ಶಿಕಾರಿ ಕಡಿಮೆಯಾಗಿರುವುದರಿಂದ ವ್ಯಾಪಾರಿಗಳಿಗೂ ಬೇಸರ ತರಿಸಿದೆ.

ಎನ್.ಆರ್.ಪುರ ಮೀನು ಮಾರ್ಕೆಟ್‌ನಲ್ಲಿ ಮಳೆಯ ನಡುವೆ ಅಪರೂಪಕ್ಕೆ ದೊಡ್ಡ ಗಾತ್ರದ ಮೀನುಗಳು ಸಿಕ್ಕಿರುವುದರಿಂದ ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾರೆ.

Edited By : PublicNext Desk
Kshetra Samachara

Kshetra Samachara

29/06/2025 01:30 pm

Cinque Terre

1.3 K

Cinque Terre

0

ಸಂಬಂಧಿತ ಸುದ್ದಿ