", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/405356-1751190069-pada.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Santosh Kaupu" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ದಕ್ಷಿಣ ಮತ್ತು ಉತ್ತರ ಸಮಿತಿಯ ನೂತನ ಅಧ್ಯಕ್ಷರು ಹಾಗ...Read more" } ", "keywords": "Kapu, youth empowerment, constitutional rights, ideological protection, social awareness, youth leadership, community development.", "url": "https://dashboard.publicnext.com/node" } ಕಾಪು: "ಸಂವಿಧಾನ, ಸಿದ್ಧಾಂತಗಳಿಗೆ ಧಕ್ಕೆಯಾದ್ರೆ ಅದನ್ನು ಎದುರಿಸಲು ಯುವಪಡೆ ಸಜ್ಜಾಗಿರಲಿ' - ಸೊರಕೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: "ಸಂವಿಧಾನ, ಸಿದ್ಧಾಂತಗಳಿಗೆ ಧಕ್ಕೆಯಾದ್ರೆ ಅದನ್ನು ಎದುರಿಸಲು ಯುವಪಡೆ ಸಜ್ಜಾಗಿರಲಿ' - ಸೊರಕೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ದಕ್ಷಿಣ ಮತ್ತು ಉತ್ತರ ಸಮಿತಿಯ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಕಾಪು ರಾಜೀವ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅವರು ಮಾತನಾಡಿ, “ಯುವಕರ ಸೇರ್ಪಡೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಸಂಘಟಿತವಾಗಿ ಮತ್ತಷ್ಟು ಬಲವರ್ಧಿತ ಮಾಡಬಹುದು. ದೇಶದ ಸಂವಿಧಾನ ಮತ್ತು ಅದರ ಸಿದ್ಧಾಂತಗಳಿಗೆ ಯಾವುದೇ ರೀತಿಯ ಧಕ್ಕೆಯುಂಟಾದರೆ, ಅದನ್ನು ನಿಭಾಯಿಸಲು ಯುವಪಡೆ ಸಜ್ಜಾಗಿರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಮ್ಮದ್ ನಿಯಾಜ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ದಕ್ಷಿಣ ಸಮಿತಿ ಅಧ್ಯಕ್ಷ ಗೌರೀಶ್ ಕೋಟ್ಯಾನ್, ಉತ್ತರ ಸಮಿತಿ ಅಧ್ಯಕ್ಷ ಶರತ್ ನಾಯ್ಕ್ ಮತ್ತು ಅವರ ತಂಡಕ್ಕೆ ನಿರ್ಗಮಿತ ಪದಾಧಿಕಾರಿಗಳು ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕಾಪು ಬ್ಲಾಕ್ ಉಸ್ತುವಾರಿ ಇನಾಯತ್ ಅಲಿ ಮೂಲ್ಕಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ಸಮಿತಿ ಅಧ್ಯಕ್ಷ ವೈ. ಸುಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Edited By : Vinayak Patil
PublicNext

PublicNext

29/06/2025 03:11 pm

Cinque Terre

21.98 K

Cinque Terre

0

ಸಂಬಂಧಿತ ಸುದ್ದಿ