ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿಯಲ್ಲಿ ನಡೆಯುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

ಬಳ್ಳಾರಿ: ಡಿಸೆಂಬ‌ರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ಕಕ್ ಅವರ ಹೆಸರನ್ನು ಘೋಷಿಸಲಾಗಿದೆ. ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಕಸಾಪದ ರಾಜ್ಯಾಧ್ಯಕ್ಷರಾದ ಮಹೇಶ್ ಜೋಷಿ ಅವರು ಮಾತನಾಡಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ಕಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು. ದೀಪ ಬಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದರು.

ಬಳ್ಳಾರಿ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಸ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Edited By : PublicNext Desk
PublicNext

PublicNext

29/06/2025 03:38 pm

Cinque Terre

8.46 K

Cinque Terre

0