ಶಿವಮೊಗ್ಗ : ಶಿವಮೊಗ್ಗ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆಡಳಿತದ ಚುಕ್ಕಾಣಿ ಹಿಡಿದು 11ನೇ ವಸಂತಕ್ಕೆ ದಾಪುಕಾಲು ಇಟ್ಟಿರುವ ಹಿನ್ನೆಲೆ ದೀನದಯಾಳು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯನ್ನು ಭಾನುವಾರ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಅವರು ಮಾತನಾಡಿ ಜನಸಾಮಾನ್ಯರ ಆರ್ಥಿಕ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಹಾಗೂ ಸ್ವಾವಲಂಬಿ ಜೀವನ ನಡೆಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಕುರಿತು ಕಾರ್ಯಕರ್ತರಿಗೆ ಸಂಕ್ಷಿಪ್ತವಾಗಿ ವಿವರಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Kshetra Samachara
29/06/2025 04:07 pm