", "articleSection": "Agriculture", "image": { "@type": "ImageObject", "url": "https://prod.cdn.publicnext.com/s3fs-public/41912020250629055223filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ತರೀಕೆರೆ : 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಭದ್ರಾ ಜಲಾಶಯ...Read more" } ", "keywords": "Node", "url": "https://dashboard.publicnext.com/node" }
ತರೀಕೆರೆ : 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದ ಎಡದಂಡೆ ನಾಲೆಯ ವ್ಯಾಪ್ತಿಗೆ ಒಳಪಡುವ ಅಚ್ಚುಕಟ್ಟುದಾರರು ಎಡದಂಡೆ ನಾಲೆಯ ನೀರನ್ನು ಅವಲಂಬಿಸಿ ಭತ್ತ ಅಥವಾ ಇನ್ಯಾವುದೇ ಹೆಚ್ಚು ನೀರು ಅಗತ್ಯವಿರುವ ಬೆಳೆಗಳನ್ನು ಬೆಳೆಯಬಾರದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಬಿ.ಆರ್.ಪ್ರಾಜೆಕ್ಟ್ ಭದ್ರಾ ಯೋಜನಾ ವೃತ್ತದ ಅಧೀಕ್ಷಕರ ಅಭಿಯಂತರರು ತಿಳಿಸಿದ್ದಾರೆ. ಭದ್ರಾ ಎಡದಂಡೆ ನಾಲೆಗೆ ಹೊಸ ಗೇಟು ಅಳವಡಿಸಬೇಕಾಗಿದ್ದು, ಅಂದಾಜು ಒಂದೂವರೆ ತಿಂಗಳು ಕಾಲಾವಕಾಶ ಬೇಕಾಗಿದೆ ಎಂದು ಭದ್ರಾವತಿಯ ಕಾರ್ಯಪಾಲಕ ಇಂಜಿನಿಯರ್ರವರು ವರದಿ ನೀಡಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರ ಅನುಮತಿ ಪಡೆದು ಈ ಪ್ರಕಟಣೆ ಹೊರಡಿಸಲಾಗಿದೆ. ಭದ್ರಾ ಜಲಾಶಯದ ಎಡದಂಡೆ ನಾಲೆಯ ವ್ಯಾಪ್ತಿಯಲ್ಲಿರುವ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.
Kshetra Samachara
29/06/2025 05:52 pm