", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/405356-1751201613-kole.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SrinivasCrimeBng" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಹಳೆಯ ವೈಷಮ್ಯದ ಕಾರಣದಿಂದ ವ್ಯಕ್ತಿಯೋರ್ವನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರ...Read more" } ", "keywords": "Bengaluru, murder case, old enmity, shepherd killed, three accused arrested.", "url": "https://dashboard.publicnext.com/node" } ಬೆಂಗಳೂರು: ಹಳೇ ವೈಷಮ್ಯಕ್ಕೆ ಕುರಿಗಾಹಿಯನ್ನು ಕೊಂದಿದ್ದ ಮೂವರು ಆರೋಪಿಗಳ ಬಂಧನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹಳೇ ವೈಷಮ್ಯಕ್ಕೆ ಕುರಿಗಾಹಿಯನ್ನು ಕೊಂದಿದ್ದ ಮೂವರು ಆರೋಪಿಗಳ ಬಂಧನ

ಬೆಂಗಳೂರು: ಹಳೆಯ ವೈಷಮ್ಯದ ಕಾರಣದಿಂದ ವ್ಯಕ್ತಿಯೋರ್ವನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಜಿನಪ್ಪ (35) ಎಂಬಾತನನ್ನು ಹತ್ಯೆಗೈದಿದ್ದ ಆರೋಪದಡಿ ಪ್ರೇಮ್, ದರ್ಶನ್ ಹಾಗೂ ಮತ್ತೋರ್ವ ಅಪ್ರಾಪ್ತನನ್ನು ಬಂಧಿಸಲಾಗಿದೆ. ಜೂನ್ 23ರಂದು ಥಣಿಸಂದ್ರದ ಆಕಾಶವಾಣಿ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಆಂಜಿನಪ್ಪನ ಮೃತದೇಹ ಪತ್ತೆಯಾಗಿತ್ತು.

ಕುರಿ ಮೇಯಿಸುವ ವಿಚಾರದಲ್ಲಿ ಗಲಾಟೆ, ಹತ್ಯೆಯಲ್ಲಿ ಅಂತ್ಯವಾಗಿದೆ. ಪತ್ನಿಯಿಂದ ದೂರಾಗಿದ್ದ ಆಂಜಿನಪ್ಪ ಉಚಿತವಾಗಿ ಊಟ ತಿಂಡಿ ಸಿಗುವ ಕಡೆಗಳಲ್ಲಿ ಹೊಟ್ಟೆ ತುಂಬಿಸಿಕೊಂಡು ಕಾಲ ಕಳೆಯುತ್ತಿದ್ದ.ಕೆಲ ದಿನಗಳ ಹಿಂದೆ ಆರೋಪಿ ಪ್ರೇಮ್ ಹಾಗೂ ಆಂಜಿನಪ್ಪನ ನಡುವೆ ಕುರಿ ಮೇಯಿಸುವಾಗ ಗಲಾಟೆಯಾಗಿತ್ತು. ಜೂನ್ 23ರಂದು ಆರೋಪಿಗಳು ಮದ್ಯಪಾನ ಮಾಡಿ ತೆರಳುವಾಗ ಆಕಾಶವಾಣಿ ಲೇಔಟ್ ಬಳಿ ಆಂಜಿನಪ್ಪ ಎದುರಾಗಿದ್ದ.

ಈ ವೇಳೆ ಹಳೆ ವೈಷಮ್ಯ ಹೊಂದಿದ್ದ ಪ್ರೇಮ್, ಮತ್ತವನ ಸ್ನೇಹಿತರು ಆಂಜಿನಪ್ಪನ ಜೊತೆ ಕಿರಿಕ್ ಶುರು ಮಾಡಿ ದೊಣ್ಣೆಗಳಿಂದ ಹಲ್ಲೆ ಮಾಡಿದ್ದರು. ತಲೆಗೆ ತೀವ್ರವಾಗಿ ಗಾಯಗೊಂಡಿದ್ದ ಆಂಜಿನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದ. ಮೃತದೇಹ ಗಮನಿಸಿದ್ದ ಸ್ಥಳೀಯರೊಬ್ಬರು ಅಮೃತಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಆಂಜಿನಪ್ಪ ಕುಸಿದು ಬಿದ್ದು ಸಾವನ್ನಪ್ಪಿರಬಹುದು ಎಂದು ಆರಂಭದಲ್ಲಿ ಪೊಲೀಸರು ಶಂಕಿಸಿದ್ದರು. ಆದರೆ, ಮರಣೋತ್ತರ ಪರೀಕ್ಷಾ ವರದಿಯಲ್ಲಿ ಆಂಜಿನಪ್ಪನ ಸಾವು ಹಲ್ಲೆಯಿಂದಾಗಿ ಸಂಭವಿಸಿದೆ ಎಂದು ತಿಳಿದು ಬಂದಿತ್ತು.

ಹತ್ಯೆ ಪ್ರಕರಣ ದಾಖಲಿಸಿಕೊಂಡ ಅಮೃತಹಳ್ಳಿ ಪೊಲೀಸರು, ಅಕ್ಕಪಕ್ಕದ ರಸ್ತೆಗಳ ಸಿಸಿ ಟಿವಿ ದೃಶ್ಯಗಳು, ಸ್ಥಳೀಯರಿಂದ ಸಂಗ್ರಹಿಸಿದ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿದಾಗ ಹತ್ಯೆಯ ಹಿಂದಿನ ಕಾರಣ ಬಯಲಾಗಿದೆ. ಸದ್ಯ ಓರ್ವ ಅಪ್ರಾಪ್ತ ಸೇರಿ ಮೂವರನ್ನೂ ಪೊಲೀಸರು ಬಂಧಿಸಿದ್ದಾರೆ.

Edited By : Vinayak Patil
PublicNext

PublicNext

29/06/2025 06:23 pm

Cinque Terre

20.78 K

Cinque Terre

0

ಸಂಬಂಧಿತ ಸುದ್ದಿ