", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/405356-1751203238-agaa.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರು: ಮಲೆ ಮಹದೇಶ್ವರ ವನ್ಯಜೀವಿ ಅಭಯಾರಣ್ಯದಲ್ಲಿ ಆರು ಹುಲಿಗಳ ಸಾವಿಗೆ ಕಾರಣರಾದ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕನ್ನಡ ಕ್ರಾ...Read more" } ", "keywords": "Mysuru, tiger deaths, death penalty demand, wildlife conservation.", "url": "https://dashboard.publicnext.com/node" }
ಮೈಸೂರು: ಮಲೆ ಮಹದೇಶ್ವರ ವನ್ಯಜೀವಿ ಅಭಯಾರಣ್ಯದಲ್ಲಿ ಆರು ಹುಲಿಗಳ ಸಾವಿಗೆ ಕಾರಣರಾದ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೂಗ್ಯಂ ವಲಯದ ಮೀಣ್ಯಂ ಸಮೀಪದ ಗಾಜನೂರು ಗಸ್ತ್ ಪ್ರದೇಶದಲ್ಲಿ ವಿಷಪ್ರಯೋಗದಿಂದ ಐದು ಹುಲಿಗಳು ಮೃತಪಟ್ಟಿದ್ದವು. ಇದೀಗ ಮತ್ತೊಂದು ಹುಲಿಯೂ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಆರಕ್ಕೆ ಏರಿದೆ ಎಂದು ತಿಳಿಸಿದರು.
ಇದು ಅತ್ಯಂತ ಕ್ರೂರ ಹಾಗೂ ಹೀನ ಕೃತ್ಯ. ಇಂತಹ ದೌರ್ಜನ್ಯ ಎಸಗಿದವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಬೇಕು. ಗಲ್ಲು ಶಿಕ್ಷೆ ನೀಡುವುದು ಸೂಕ್ತ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಒತ್ತಾಯಿಸಿದರು.
ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿದ ಪರಿಣಾಮ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಭಾರತದಲ್ಲಿ ಹುಲಿ ಬೇಟೆಗೆ ಕನಿಷ್ಟ ಏಳು ವರ್ಷಗಳ ಜೈಲು ಶಿಕ್ಷೆ ನಿಗದಿಯಿದೆ, ಈ ಪ್ರಕರಣದಲ್ಲಿ ಗಲ್ಲು ಶಿಕ್ಷೆ ನೀಡುವುದೇ ನ್ಯಾಯಸಮ್ಮತ ಎಂಬ ಅಭಿಪ್ರಾಯವನ್ನು ತೇಜಸ್ವಿ ವ್ಯಕ್ತಪಡಿಸಿದ್ದಾರೆ.
PublicNext
29/06/2025 06:50 pm