ಧಾರವಾಡ: "ನಮ್ಮ ನಗರ-ಸ್ವಚ್ಛ ನಗರ" ಅಭಿಯಾನದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸ್ವತಃ ಚರಂಡಿ ಸ್ವಚ್ಛಗೊಳಿಸಿ, ಕಸ ಗುಡಿಸುವುದರ ಮೂಲಕ ಎಲ್ಲರ ಗಮನ ಸೆಳೆದರು. ಸಚಿವರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಕೂಡ ಸಾಥ್ ನೀಡಿ ಅವರೂ ಕಸ ಗುಡಿಸಿದರು.
ಧಾರವಾಡದ ಮಾಳಮಡ್ಡಿಯಲ್ಲಿ ಸಚಿವ ಸಂತೋಷ ಲಾಡ್ ಅವರು ಈ ಅಭಿಯಾನಕ್ಕೆ ಚಾಲನೆ ನೀಡಿ ಸ್ವತಃ ಚರಂಡಿಯೊಂದನ್ನು ಕ್ಲೀನ್ ಮಾಡಿ ಅಲ್ಲಲ್ಲಿ ಬಿದ್ದಿದ್ದ ಕಸ ಗುಡಿಸಿ ಅಭಿಯಾನಕ್ಕೆ ಕೈ ಜೋಡಿಸಿದರು.
ಸಚಿವರೊಂದಿಗೆ ಮೇಯರ್ ರಾಮಣ್ಣ ಬಡಿಗೇರ, ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಹುಡಾ ಆಯುಕ್ತ ಡಾ.ಸಂತೋಷಕುಮಾರ ಬಿರಾದಾರ, ಪಾಲಿಕೆ ವಿರೋಧ ಪಕ್ಷದ ನಾಯಕ ರಾಜಶೇಖರ ಕಮತಿ, ತಹಶೀಲ್ದಾರ್ ಡಿ.ಎಚ್.ಹೂಗಾರ ಸೇರಿದಂತೆ ವಿವಿಧ ಕಾಲೇಜುಗಳ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಸ ಗುಡಿಸುವ ಮೂಲಕ ನಮ್ಮ ನಗರ ಸ್ವಚ್ಛ ನಗರ ಅಭಿಯಾನಕ್ಕೆ ಸಾಥ್ ನೀಡಿದರು.
ಧಾರವಾಡದ ರೈಲು ನಿಲ್ದಾಣ ರಸ್ತೆ, ಶಿವಾಜಿ ಸರ್ಕಲ್, ಹೆಬ್ಬಳ್ಳಿ ಅಗಸಿ ಕಡೆ ಈ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಯಿತು.
Kshetra Samachara
29/06/2025 07:03 pm