ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: "ಡಿಸೆಂಬರ್ ನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತೆ'- ಗೋವಿಂದ ಕಾರಜೋಳ ಭವಿಷ್ಯ!

ಚಳ್ಳಕೆರೆ: "ಡಿಸೆಂಬರ್ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಸುಮಾರು 150 ಶಾಸಕರ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಆಗಲಿದೆ" ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ. ಕಾರಜೋಳ ಭವಿಷ್ಯವಾಣಿ ನುಡಿದಿದ್ದಾರೆ.

ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, "ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದುರಾಡಳಿತ ನಡೆಸುತ್ತಿದ್ದು, ಜನತೆ ಗ್ಯಾರಂಟಿ ಯೋಜನೆಗಳಿಂದ ಬೇಸತ್ತು ಹೋಗಿದ್ದಾರೆ ಎಂದರು.

“ಬೆಲೆ ಏರಿಕೆ, ರೈತರ ಆತ್ಮಹತ್ಯೆ, ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚಾಗಿವೆ. ಎಸ್‌ಸಿ, ಎಸ್‌ಟಿ ನಿಗಮಗಳ ₹34,000 ಕೋಟಿ ಹಣವನ್ನು ಕಾಂಗ್ರೆಸ್ ಬಳ್ಳಾರಿ ಉಪಚುನಾವಣೆಗಾಗಿ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಗ್ಯಾರಂಟಿ ಯೋಜನೆಯಿಂದಾಗಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿದ್ದು, ಮಹಿಳೆಯರಿಗೆ ಮನೆಯ ಖರ್ಚು ನಡೆಸುವುದು ಕಷ್ಟವಾಗಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್-ಬಿಜೆಪಿ ಒಂದಾಗಲಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಒಂದೇ ತಾಯಿಯ ಮಕ್ಕಳಂತೆ ನಡೆದುಕೊಳ್ಳಬೇಕು. ಟಿಕೆಟ್ ಹಂಚಿಕೆ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದ್ದು, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು.

"ಬಿಜೆಪಿ ಈಗ ರಾಜ್ಯದಲ್ಲಿ ಆಡಳಿತದಲ್ಲಿಲ್ಲದಿದ್ದರೂ ಕೇಂದ್ರದಲ್ಲಿ ಮೋದಿಯವರ ನೇತೃತ್ವದಲ್ಲಿ ಅಧಿಕಾರದಲ್ಲಿದೆ. ಅವರ ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೆ ತಲುಪಿಸಿ ಮತಯಾಚನೆ ಮಾಡಬೇಕು. ಭಾರತ ಇಂದು ಜಿಡಿಪಿ ದರದಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿದೆ" ಎಂದರು.

ಟಿ.ಟಿ. ಕುಮಾರಸ್ವಾಮಿಯವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿರುವುದರಿಂದ ಚಳ್ಳಕೆರೆ ತಾಲ್ಲೂಕಿನ ಕಾರ್ಯಕರ್ತರಿಗೆ ಆನೆ ಬಲ ಸಿಕ್ಕಂತಾಗಿದೆ ಎಂದು ಕಾರಜೋಳ ಅಭಿಪ್ರಾಯಪಟ್ಟರು.

Edited By : Vinayak Patil
PublicNext

PublicNext

29/06/2025 07:03 pm

Cinque Terre

19.69 K

Cinque Terre

0

ಸಂಬಂಧಿತ ಸುದ್ದಿ