", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/405356-1751206082-palati.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ : ಆಟೋ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದು, ಅದೃಷ್ಟವಶಾತ್ ಆಟೋದಲ್ಲಿದ್ದ ಬಾಣಂತಿ ಹಾಗೂ ನವಜಾ...Read more" } ", "keywords": "Challakere, auto bike accident, injured, miraculous escape.", "url": "https://dashboard.publicnext.com/node" }
ಚಳ್ಳಕೆರೆ : ಆಟೋ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದು, ಅದೃಷ್ಟವಶಾತ್ ಆಟೋದಲ್ಲಿದ್ದ ಬಾಣಂತಿ ಹಾಗೂ ನವಜಾತ ಶಿಶು ಪವಾಡ ಸದೃಶ ಪಾರಾಗಿದ್ದಾರೆ.
ಈ ಘಟನೆ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದ ಸಮೀಪದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಚಿತ್ರದುರ್ಗದ ಕೋಡೆನಹಟ್ಟಿಯ ಸ್ವಾಮಿ ಎಂಬವರ ಆಟೋದಲ್ಲಿ ಬಾಣಂತಿ ಹಾಗೂ ನವಜಾತ ಶಿಶುವನ್ನು ಪರಶುರಾಮಪುರಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ಚಳ್ಳಕೆರೆಗೆ ಬರುತ್ತಿದ್ದ ಬೈಕ್ ಸವಾರ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ಪರಿಣಾಮ ಆಟೋ ಪಲ್ಟಿಯಾಗಿದೆ.
ಅಪಘಾತದಲ್ಲಿ ಆಟೋದಲ್ಲಿದ್ದ ನಾಲ್ವರು ಹಾಗೂ ಬೈಕ್ನಲ್ಲಿದ್ದ ಇಬ್ಬರು ಸೇರಿ ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.
ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
29/06/2025 07:38 pm