", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/405356-1751206867-prana.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ಬೈಕ್ ಶೋ ರೂಮ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ ಕೆಲಸದ ವೇಳೆಯೇ ಹೃದಯಾಘಾತಕ್ಕೆ ಒಳಗಾಗ...Read more" } ", "keywords": "Chikkamagaluru, security guard death, heart attack, sudden collapse.", "url": "https://dashboard.publicnext.com/node" }
ಚಿಕ್ಕಮಗಳೂರು: ಬೈಕ್ ಶೋ ರೂಮ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ ಕೆಲಸದ ವೇಳೆಯೇ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ನಿವಾಸಿ ಶಿವಮೂರ್ತಿ (50) ಎಂದು ಗುರುತಿಸಲಾಗಿದೆ. ಸದಾ ಕರ್ತವ್ಯ ನಿರ್ವಹಣೆಯಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದ ಶಿವಮೂರ್ತಿ ಎಂದಿನಂತೆ ಕೆಲಸಕ್ಕೆ ಹಾಜರಾಗಿದ್ದರು. ಕೆಲಸದ ಮಧ್ಯೆ ಅಸ್ವಸ್ಥರಾದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಶೋ ರೂಮ್ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದರಾದರು. ಅಷ್ಟರಲ್ಲಾಗಲೇ ಶಿವಮೂರ್ತಿಯವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ.
ಪಕ್ಕದ ಹಾಸನ ಜಿಲ್ಲೆಯಲ್ಲಿ ಒಂದೇ ತಿಂಗಳಿನಲ್ಲಿ 18 ಮಂದಿ ಹೃದಯಾಘಾತಕ್ಕೆ ಬಲಿಯಾಗಿರುವ ಕುರಿತು ಜನ ಆತಂಕದಲ್ಲಿರುವಾಗಲೇ ಇತ್ತ ಚಿಕ್ಕಮಗಳೂರಿನಲ್ಲೂ ಇಂತಹದೇ ಘಟನೆ ನಡೆದಿರುವುದು ಜನರಿಗೆ ಎಚ್ಚರಿಕೆಯ ಗಂಟೆಯಾಗಿದೆ.
PublicNext
29/06/2025 07:51 pm