", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1751254684-sagar.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "JameelSagar" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಾಗರ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನೆ ಮಾಡಿದ 67 ವರ್ಷದ ವೃದ್ಧೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಸಾಗರ ತ...Read more" } ", "keywords": "Sagara elderly woman attack, Gowthampura shocking incident, elderly woman tied to pole, assault on 67-year-old woman, Sagara crime news.", "url": "https://dashboard.publicnext.com/node" }
ಸಾಗರ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನೆ ಮಾಡಿದ 67 ವರ್ಷದ ವೃದ್ಧೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಸಾಗರ ತಾಲೂಕಿನ ಆನಂದಪುರ ಹೋಬಳಿಯ ಗೌತಮಪುರ ಗ್ರಾಮದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ನಿವಾಸಿ ಹುಚ್ಚಮ್ಮ ಎಂಬ ವೃದ್ಧೆಯ ಮನೆ ಎದುರು ಕಸ ಹಾಕಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ನೆರೆಹೊರೆಯವರಾದ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ಎಂಬವರು ವೃದ್ಧೆಗೆ ನಿಂದಿಸಿ, ಅವರನ್ನು ಮನೆಯಿಂದ ಎಳೆದ್ಯೊಯ್ದು ಕಂಬಕ್ಕೆ ಹಗ್ಗದಿಂದ ಕಟ್ಟಿ ಹಲ್ಲೆ ನಡೆಸಿದ್ದಾರೆ.
ಹುಚ್ಚಮ್ಮ ಅವರು ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಆರೋಪಿಗಳಾದ ಪ್ರೇಮ, ಮಂಜುನಾಥ್ ಹಾಗೂ ದರ್ಶನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹಲ್ಲೆಗೊಳಗಾದ ವೃದ್ಧೆಯ ಪುತ್ರ ಕನ್ನಪ ಮಾತನಾಡಿ, "ನನ್ನ ತಾಯಿ ಮೇಲೆ ನಡೆದ ಹಲ್ಲೆ ಆಘಾತಕಾರಿ. ಪೋಲಿಸ್ ಇಲಾಖೆ ನನ್ನ ತಾಯಿ-ತಂದೆಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಈ ಅಮಾನವೀಯ ಕೃತ್ಯವು ಸಮಾಜವೇ ತಲೆತಗ್ಗಿಸುವಂತ ಘಟನೆಯಾಗಿದೆ. ಶಾಸಕರು ಮತ್ತು ಪೋಲಿಸ್ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.
- ಜಮೀಲ್ ಸಾಗರ್, ಪಬ್ಲಿಕ್ ನೆಕ್ಸ್ಟ್ ಸಾಗರ
PublicNext
30/06/2025 09:08 am