", "articleSection": "Sports,Education", "image": { "@type": "ImageObject", "url": "https://prod.cdn.publicnext.com/s3fs-public/463655-1751263177-manjunath---2025-06-30T112926.581.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Mallesh Suranagi" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಹುಬ್ಬಳ್ಳಿ: ಆಧುನಿಕ ಜಗತ್ತಿನಲ್ಲಿ ಜ್ಞಾನಾರ್ಜನೆಗೆ ಲಭಿಸುವ ಎಲ್ಲ ತಂತ್ರಜ್ಞಾನಗಳನ್ನು ಸರಿಯಾಗಿ ಉಪಯೋಗಿಸಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉ...Read more" } ", "keywords": ""technology usage, importance of technology, digital awareness, tech for development, responsible tech use, Hubballi, Virendra Murasheelee" ", "url": "https://dashboard.publicnext.com/node" }
ಹುಬ್ಬಳ್ಳಿ: ಆಧುನಿಕ ಜಗತ್ತಿನಲ್ಲಿ ಜ್ಞಾನಾರ್ಜನೆಗೆ ಲಭಿಸುವ ಎಲ್ಲ ತಂತ್ರಜ್ಞಾನಗಳನ್ನು ಸರಿಯಾಗಿ ಉಪಯೋಗಿಸಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ಕೃಷ್ಠವಾದ ಸಾಧನೆಗೈಯಬೇಕೆಂದು ಹಿರಿಯ ಲೆಕ್ಕ ಪರೀಶೋಧಕರಾದ ವೀರೇಂದ್ರ ಮೂರಶಿಳ್ಳಿನ ಅಭಿಪ್ರಾಯ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಗ್ಲೋಬಲ್ ವಾಣಿಜ್ಯ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾ ಹಾಗೂ ಕ್ರೀಡೇತರ ಸಂಘಗಳ ಸಮಾರೋಪ ಸಮಾರಂಭ ಸಂಭ್ರಮ-2025 ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅಥಿತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಸಾಧನೆಗೆ ಯಾವುದೇ ಮಿತಿ ಇಲ್ಲ ಸಾಧಿಸಬೇಕೆಂಬ ಛಲ ಇದ್ದಲ್ಲಿ ಯಾವುದು ಕೂಡ ಅಸಾಧ್ಯವಲ್ಲ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಅವಿರತವಾಗಿ ಪ್ರಯತ್ನಿಸಬೇಕೆಂದು ಕರೆ ನೀಡಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಹಾಲಿ ಕಾರ್ಪೋರೇಟರ್ ವೀಣಾ ಭರದ್ವಾಡ ಮಾತನಾಡಿ, ಪೈಪೋಟಿಯ ಜೊತೆಗೆ ಸೃಜನಶೀಲತೆಯ ಆಗರದಲ್ಲಿ ಯಶಸ್ವಿಯಾಗಿ ಜೀವನ ರೂಪಿಸಿಕೊಳ್ಳಲು ಕಠಿಣ ಪರಿಶ್ರಮ ಹಾಗೂ ಯೋಜನಾಬದ್ದ ಜೀವನ ಶೈಲಿ, ವೃತ್ತಿಪರತೆಯ ಸಹಾಯದಿಂದ ವಿದ್ಯಾರ್ಥಿಗಳು ಭವಿಷ್ಯದ ಭಾರತಕ್ಕೆ ಕೊಡುಗೆ ನೀಡಬೇಕೆಂದರು. ವಾಣಿಜ್ಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಅರಿಯಲು ಪ್ರಯತ್ನ ಪಡಬೇಕೆಂದು ಕರೆಕೊಟ್ಟರು.
ಅಧ್ಯಕ್ಷೀಯ ಸಮಾರೋಪದಲ್ಲಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಪುಷ್ಪಾ ಹಿರೇಮಠ, ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಪ್ರತಿಯೊಂದು ಘಟನೆಯನ್ನು ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಬಳಸಿಕೊಳ್ಳಬೇಕೆಂದರು.
ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಯಶಸ್ವಿಯಾಗಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ವೇದಿಕೆಯಲ್ಲಿ ಗೋಬಲ್ ಶಿಕ್ಷಣ ಪ್ರತಿಷ್ಠಾನದ ಡೀನ್ ಡಾ. ಮಹೇಶ ದೇಶಪಾಂಡೆ, ಪ್ಲೇಸಮೆಂಟ್ ಅಧಿಕಾರಿ ಪ್ರೊ. ಸುನೀಲ ಪ್ರತಾಪನ್ ಉಪಸ್ಥಿತರಿದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪಾರಿತೋಷಕಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಪ್ರಾಚಾರ್ಯರಾದ ರಾಧಾ ರಾಮದುರ್ಗ ಅವರು ಸ್ವಾಗತಿಸಿದರು. ಪ್ರೊ ನೇಹಾ ಸಫಾರೆ ವಾರ್ಷಿಕ ವರದಿಯನ್ನು ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಗಳಿಂದ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಎಲ್ಲ ಬೋಧಕ ಹಾಗೂ ಬೊಧಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
Kshetra Samachara
30/06/2025 11:29 am