", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/405356-1751275395-gra.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Mallesh Suranagi" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ : ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳೇ ಕಳೆದಿವೆ. ದೇಶ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಸಾಧನೆ ಮಾಡಿ ಹೆಮ್ಮೆಯ ಹೆಗ್ಗಳಿಕೆಯಿಂದ...Read more" } ", "keywords": "village gets bus, rural connectivity, Public Next media impact, road development.", "url": "https://dashboard.publicnext.com/node" }
ಹುಬ್ಬಳ್ಳಿ : ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳೇ ಕಳೆದಿವೆ. ದೇಶ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಸಾಧನೆ ಮಾಡಿ ಹೆಮ್ಮೆಯ ಹೆಗ್ಗಳಿಕೆಯಿಂದ ಹೇಳಿಕೊಳ್ಳುತ್ತಿದೆ. ಹೀಗಿದ್ದರೂ ಇಲ್ಲೊಂದು ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆಯೇ ಇರಲಿಲ್ಲ. ಈ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಜಾರಿಯಾಗಿದೆ. ಇದು ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಬಿಗ್ ಇಂಪ್ಯಾಕ್ಟ್ ಆಗಿದೆ.
ಸುಮಾರು 78 ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ರಾಮಾಪೂರಕ್ಕೆ ಮಾತ್ರ ಬಸ್ಸಿನ ವ್ಯವಸ್ಥೆಯೇ ಇರಲಿಲ್ಲ.4G, 5G ಕಾಲದಲ್ಲಿಯೂ ಕೂಡ ಕಾಲು ನಡಿಗೆಯಲ್ಲಿಯೇ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಓಡಾಡುವಂತಾಗಿತ್ತು. ಈ ಬಗ್ಗೆ ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ಪಬ್ಲಿಕ್ ನೆಕ್ಸ್ಟ್ ವರದಿ ಮಾಡುವ ಮೂಲಕ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿತ್ತು.
ವರದಿಗೆ ಎಚ್ಚೇತ್ತುಕೊಂಡ ಜನಪ್ರತಿನಿಧಿಗಳು ಹಾಗೂ ಸಾರಿಗೆ ಸಂಸ್ಥೆ ಅಧಿಕಾರಿಗಳು ಹುಬ್ಬಳ್ಳಿ ತಾಲೂಕಿನ ರಾಮಾಪೂರಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ್ದು, ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್ ಆಗಿದೆ.
ನಮಗೆ ಆಸ್ತಿ ಬೇಡ, ಹಣ ಬೇಡ ವಿದ್ಯಾಭ್ಯಾಸಕ್ಕಾಗಿ ನಮ್ಮ ಗ್ರಾಮಕ್ಕೆ ಒಂದು ಬಸ್ ಬಿಡಿ ಎನ್ನುತ್ತಿರುವ ಮಕ್ಕಳು ಮಾತನ್ನು ಪಬ್ಲಿಕ್ ನೆಕ್ಸ್ಟ್ ವಿಶೇಷ ವರದಿ ಮಾಡಿದ್ದು, ಈಗ ವಿದ್ಯಾರ್ಥಿಗಳ ಕಷ್ಟದ ಬದುಕಿಗೆ ಬಸ್ಸಿನ ವ್ಯವಸ್ಥೆ ಜಾರಿಯಾಗುವಂತೆ ಮಾಡಿದ್ದ ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಒಟ್ಟಿನಲ್ಲಿ ಓದುವ ಮಕ್ಕಳಿಗೆ ಮಾತ್ರವಲ್ಲದೇ ಊರಿನ ಜನರಿಗೆ ಏನಾದರೂ ಸಮಸ್ಯೆ ಉಂಟಾದರೇ ದೇವರೆ ಗತಿ ಎಂಬುವಂತಾಗಿತ್ತು. ಪಬ್ಲಿಕ್ ನೆಕ್ಸ್ಟ್ ವರದಿಯಿಂದ 78 ವರ್ಷದ ಸಮಸ್ಯೆಗೆ ಈಗ ಮುಕ್ತಿ ಸಿಕ್ಕಂತಾಗಿದೆ.
ಮಲ್ಲೇಶ್ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
Kshetra Samachara
30/06/2025 02:53 pm