", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/405356-1751277457-vaha.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆ ಮೇರೆಗೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುಬ್ಬಳ್ಳಿಯ ರಾಜ್ಯ ಸಮಾಚಾ...Read more" } ", "keywords": "Hubballi, Pralhad Joshi, vehicle handover, journalists, media support.", "url": "https://dashboard.publicnext.com/node" } ಹುಬ್ಬಳ್ಳಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಕ್ಕೆ ಪತ್ರಕರ್ತರಿಗೆ ವಾಹನ ಹಸ್ತಾಂತರ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಕ್ಕೆ ಪತ್ರಕರ್ತರಿಗೆ ವಾಹನ ಹಸ್ತಾಂತರ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆ ಮೇರೆಗೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುಬ್ಬಳ್ಳಿಯ ರಾಜ್ಯ ಸಮಾಚಾರ ಕೇಂದ್ರಕ್ಕೆ, ಟಾಟಾ ಮಾಣಿಕಭಾಗ್ ಆಟೋಮೊಬೈಲ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ, ಸಿ.ಎಸ್‌‌.ಆರ್. ಅನುದಾನದಲ್ಲಿ ಕೊಡ ಮಾಡಲಾಗಿರುವ 32 ಆಸನಗಳ ಪತ್ರಕರ್ತರ ವಾಹನವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಯಿತು.

ವಾಹನವನ್ನು ಹಸ್ತಾಂತರಿಸಿ ಮಾತನಾಡಿದ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರು, "ಹುಬ್ಬಳ್ಳಿಯ ವಾರ್ತಾ ಇಲಾಖೆ ಕಚೇರಿಗೆ ಹೊಸ ಪತ್ರಕರ್ತರ ವಾಹನ ಅಗತ್ಯವಿದೆ ಎಂದು ಪತ್ರಕರ್ತರು ಈ ಹಿಂದೆ ಅನೇಕ ಮನವಿ ಮಾಡಿದ್ದರು. ಹೀಗಾಗಿ ಟಾಟಾ ಮೋಟರ್ಸ್ ಕಂಪನಿ ಅವರಿಗೆ ಈ ವಿಷಯ ಮನವರಿಕೆ ಮಾಡಿಕೊಡಲಾಗಿತ್ತು. ಅದರಂತೆ ಇಂದು ಪತ್ರಕರ್ತರ ವಾಹನವನ್ನು ವಾರ್ತಾ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ" ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್.ಪಾಟೀಲ, ಎಸ್.ವಿ.ಸಂಕನೂರ, ಜಿಲ್ಲಾಧಿಕಾರಿ ದಿವ್ಯಪ್ರಭು, ಮಾಣಿಕ್‌‌ಬಾಗ್ ಅಟೋಮೋಬೈಲ್ಸ್ ಪ್ರೈವೇಟ್ ಲಿಮಿಟೆಡ್‌‌ನ ನಿರ್ದೇಶಕರಾದ ಶರಂಗ ಶಾ, ಟಾಟಾ‌ ಮೋಟರ್ಸ್ ವಿ.ಕೆ.ಸಿಂಗ್, ರವಿ ಕುಲಕರ್ಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಗುರುನಾಥ ಕಡಬೂರ, ವಾರ್ತಾ ಸಹಾಯಕ ಡಾ.ಸುರೇಶ ಹಿರೇಮಠ, ಪತ್ರಕರ್ತರು, ಟಾಟಾ ಮೋಟರ್ಸ್ ಕಂಪನಿಯ‌ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/06/2025 03:27 pm

Cinque Terre

31.58 K

Cinque Terre

0

ಸಂಬಂಧಿತ ಸುದ್ದಿ