", "articleSection": "Entertainment,Cinema", "image": { "@type": "ImageObject", "url": "https://prod.cdn.publicnext.com/s3fs-public/454738-1751277980-New-(1280-x-720-px)-(34).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ChaitanyaKothari" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಸ್ಯಾಂಡಲ್ ವುಡ್ ಗೋಲ್ಡನ್ ಸ್ಟಾರ್, ಸರಳ ವ್ಯಕ್ತಿತ್ವದ ನಟ ಗಣೇಶ್ ಅವರು 47ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಅವರ ನಟನೆಯ ಕೃಷ್ಣಂ...Read more" } ", "keywords": "Ganesh Birthday: Golden Star Ganesh asks fans not to visit his home", "url": "https://dashboard.publicnext.com/node" } ಜುಲೈ 2 ರಂದು ನಟ ಗಣೇಶ್ ಜನ್ಮದಿನ - ಮನೆ ಬಳಿ ಬರಬೇಡಿ ಎಂದು ಕೋರಿದ ಗೋಲ್ಡನ್ ಸ್ಟಾರ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜುಲೈ 2 ರಂದು ನಟ ಗಣೇಶ್ ಜನ್ಮದಿನ - ಮನೆ ಬಳಿ ಬರಬೇಡಿ ಎಂದು ಕೋರಿದ ಗೋಲ್ಡನ್ ಸ್ಟಾರ್

ಬೆಂಗಳೂರು : ಸ್ಯಾಂಡಲ್ ವುಡ್ ಗೋಲ್ಡನ್ ಸ್ಟಾರ್, ಸರಳ ವ್ಯಕ್ತಿತ್ವದ ನಟ ಗಣೇಶ್ ಅವರು 47ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಅವರ ನಟನೆಯ 'ಕೃಷ್ಣಂ ಪ್ರಯಣ ಸಖಿ' ಸಿನಿಮಾ ಭರ್ಜರಿ ಹಿಟ್ ಆಗಿತ್ತು. ಹಾಡುಗಳು ಇಂದಿಗೂ ಗುನುಗುವಂತೆ ಮಾಡಿತು. ಇದೀಗ ಅವರ ನಟನೆಯ ಮುಂದಿನ ಸಿನಿಮಾಗಳು ಶೂಟಿಂಗ್ ಹಂತದಲ್ಲಿವೆ. ಇದೇ ವೇಳೆ ಅವರ ಹುಟ್ಟು ಹಬ್ಬವು ಎದುರಾಗಿದೆ. ಹೀಗಾಗಿ ನಟ ಗಣೇಶ್ ಅವರು ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ್ದಾರೆ.

ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು, 'ಪಿನಾಕ' ಸಿನಿಮಾ ಶೂಟಿಂಗ್‌ ಗಳಲ್ಲಿ ಬ್ಯೂಸಿ ಇದ್ದಾರೆ. ಈ ಮಧ್ಯೆ ಜುಲೈ 2ರಂದು ಅವರು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇದೇ ವಿಚಾರವಾಗಿ ಇಂದು ಬೆಳಗ್ಗೆ ಅವರು ಸಾಮಾಜಿಕ ಜಾಲತಾಣಗಳ ಅಭಿಮಾನಿಗಳ ಕುರಿತು ವಿಶೇಷ ಮನವಿ ಮಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಆತ್ಮೀಯ ಅಭಿಮಾನಿ ಸ್ನೇಹಿತರೆ, ಜುಲೈ 2 ನಾನು ಹುಟ್ಟಿದ ದಿನ. ಸಹಜವಾಗಿ ನನಗದು ನಿಮ್ಮ ಪ್ರೀತಿ ಹಾಗು ಅಭಿಮಾನವನ್ನು ಅತ್ಯಂತ ಸಮೀಪದಿಂದ ಕಣ್ಣುಂಬಿಕೊಂಡು ಸಂಭ್ರಮಿಸುವ ದಿನ. ಆದರೆ ಈ ಬಾರಿ ನಾನು 'ಪಿನಾಕ' ಹಾಗು ಯುವರ್ಸ್ ಸಿನ್ಸಿಯರ್ಲಿ ರಾಮ್' ಚಿತ್ರಗಳ ಹೊರಾಂಗಣ ಚಿತ್ರೀಕರಣಗಳಲ್ಲಿ ಭಾಗವಹಿಸಬೇಕಿರುವ ಕಾರಣ ಜುಲೈ 2 ರಂದು ನಾನು ನಿಮ್ಮೆಲ್ಲರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ.

ನಿಮ್ಮನ್ನು ರಂಜಿಸುವುದಕ್ಕಿಂತ ದೊಡ್ಡ ಹಬ್ಬ ನನಗೆ ಮತ್ತೊಂದಿಲ್ಲ. ಆದ ಕಾರಣ ಯಾರೂ ಮನೆಯ ಬಳಿ ಬರದೆ, ಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ತಾವುಗಳು ಇದ್ದಲ್ಲಿದಂಲೇ ನನಗೆ ಆಶಿಸಿ ಆಶೀರ್ವದಿಸಬೇಕೆಂದು ಈ ಮೂಲಕ ವಿನಂತಿಸುತ್ತೇನೆ-ನಿಮ್ಮವ ಗಣೇಶ'' ಎಂದು ಬರೆದುಕೊಂಡು ಮನವಿ ಮಾಡಿದ್ದಾರೆ.

ಕಳೆದ ವರ್ಷ ತೆರೆಕಂಡ ಗಣೇಶ್ ಅಭಿನಯದ ಕೃಷ್ಣಂ ಪ್ರಣಯ ಸಖಿ" ಚಿತ್ರ ಉತ್ತಮ ಯಶಸ್ಸು ಗಳಿಸಿತ್ತು. ಇದೀಗ ಪಿನಾಕ ,ಯುವರ್ಸ್ ಸಿನ್ಸಿಯರ್ಲಿ ರಾಮ್" ಮುಂತಾದ ಅವರ ಮುಂದಿನ ಚಿತ್ರಗಳ ಬಗ್ಗೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Edited By :
PublicNext

PublicNext

30/06/2025 03:37 pm

Cinque Terre

7.18 K

Cinque Terre

0