", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/454738-1751279863-New-(1280-x-720-px)-(35).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Padmashree" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ನಗರವನ್ನು ಪ್ರವಾಹದಿಂದ ರಕ್ಷಿಸುವ ನಿಟ್ಟಿನಲ್ಲಿ, ಜೆ.ಪಿ. ನಗರದ ಸಿಂಧೂರ ಕಲ್ಯಾಣ ಮಂಟಪದ ಸುತ್ತಮುತ್ತಲಿನ ಮಳೆ ನೀರುಗಾಲುವೆ ಕಾಮಗಾರ...Read more" } ", "keywords": "Bengaluru Water Infrastructure: BBMP commissioner directs completion", "url": "https://dashboard.publicnext.com/node" } ಬೆಂಗಳೂರು : ಡಿಸೆಂಬರ್ ಅಂತ್ಯದೊಳಗೆ ನೀರುಗಾಲುವೆ ಕಾಮಗಾರಿ ಪೂರ್ಣಗೊಳಿಸಿ - ಬಿಬಿಎಂಪಿ ಆಯುಕ್ತ ಸೂಚನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಡಿಸೆಂಬರ್ ಅಂತ್ಯದೊಳಗೆ ನೀರುಗಾಲುವೆ ಕಾಮಗಾರಿ ಪೂರ್ಣಗೊಳಿಸಿ - ಬಿಬಿಎಂಪಿ ಆಯುಕ್ತ ಸೂಚನೆ

ಬೆಂಗಳೂರು : ನಗರವನ್ನು ಪ್ರವಾಹದಿಂದ ರಕ್ಷಿಸುವ ನಿಟ್ಟಿನಲ್ಲಿ, ಜೆ.ಪಿ. ನಗರದ ಸಿಂಧೂರ ಕಲ್ಯಾಣ ಮಂಟಪದ ಸುತ್ತಮುತ್ತಲಿನ ಮಳೆ ನೀರುಗಾಲುವೆ ಕಾಮಗಾರಿಯನ್ನು ಈ ವರ್ಷಾಂತ್ಯದೊಳಗೆ ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಂದು ದಕ್ಷಿಣ ವಲಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, 1.3 ಕಿ.ಮೀ ಉದ್ದದ ಈ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವ ಮೂಲಕ ಪ್ರವಾಹ ತಡೆಯುವಂತೆ ನಿರ್ದೇಶಿಸಿದರು. ಸುರಕ್ಷತಾ ಕ್ರಮವಾಗಿ ಚೇಂಬರ್‌ಗಳ ಬಳಿ ಬ್ಯಾರಿಕೇಡ್ ಅಳವಡಿಸಲು ಹಾಗೂ ಪಾದಚಾರಿ ಮಾರ್ಗಗಳ ನಿರ್ವಹಣೆಗೆ ಒತ್ತು ನೀಡುವಂತೆ ತಿಳಿಸಿದರು.

ವಿಲ್ಸನ್ ಗಾರ್ಡನ್ ಬಳಿಯ ವಿದ್ಯುತ್ ಚಿತಾಗಾರಕ್ಕೆ ಭೇಟಿ ನೀಡಿದ ಮುಖ್ಯ ಆಯುಕ್ತರು, ಸ್ವಚ್ಛತೆ ಕಾಪಾಡಲು ಮತ್ತು ಪ್ರಗತಿಯಲ್ಲಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.

Edited By :
PublicNext

PublicNext

30/06/2025 04:09 pm

Cinque Terre

7.73 K

Cinque Terre

0

ಸಂಬಂಧಿತ ಸುದ್ದಿ