", "articleSection": "Agriculture", "image": { "@type": "ImageObject", "url": "https://prod.cdn.publicnext.com/s3fs-public/286525-1751280053-WhatsApp-Image-2025-06-30-at-4.10.43-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಸದ್ಯ ಧಾರವಾಡ ಜಿಲ್ಲೆಯಾದ್ಯಂತ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗುತ್ತಿದ್ದು, ಇದರಿಂದ ಅನೇಕ ಕಡೆಗಳಲ್ಲಿ ಅದರಲ್ಲೂ ನವಲಗುಂದ ತಾಲೂಕಿನಾದ್...Read more" } ", "keywords": "Dharwad farmers receive loan repayment notices, crop loan issues, bank notices to farmers, agricultural loan repayment problems, Karnataka farmer struggles.", "url": "https://dashboard.publicnext.com/node" } ಧಾರವಾಡ: ಸಾಲ ಮರುಪಾವತಿ ಮಾಡುವಂತೆ ರೈತರಿಗೆ ನೋಟಿಸ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಾಲ ಮರುಪಾವತಿ ಮಾಡುವಂತೆ ರೈತರಿಗೆ ನೋಟಿಸ್

ಧಾರವಾಡ: ಸದ್ಯ ಧಾರವಾಡ ಜಿಲ್ಲೆಯಾದ್ಯಂತ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗುತ್ತಿದ್ದು, ಇದರಿಂದ ಅನೇಕ ಕಡೆಗಳಲ್ಲಿ ಅದರಲ್ಲೂ ನವಲಗುಂದ ತಾಲೂಕಿನಾದ್ಯಂತ ಹೆಚ್ಚಿನ ಮಳೆಗೆ ಬೆಳೆ ಹಾಳಾಗಿದೆ. ಇದರ ಮಧ್ಯೆ ಅದೇ ನವಲಗುಂದ ತಾಲೂಕಿನ ಮೊರಬ ಗ್ರಾಮದ ರೈತರಿಗೆ ಬ್ಯಾಂಕ್ ಆಫ್ ಬರೋಡಾ ಶಾಕ್ ನೀಡಿದೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಹೀಗೆ ಕೈಯಲ್ಲಿ ಬ್ಯಾಂಕ್ ನೀಡಿದ ನೋಟಿಸ್ ಹಿಡಿದು ನಿಂತಿರುವ ಇವರೆಲ್ಲ ನವಲಗುಂದ ತಾಲೂಕಿನ ಮೊರಬ ಗ್ರಾಮದ ರೈತರು. ಈ ರೈತರು ಕೃಷಿ ಚಟುವಟಿಕೆಗಾಗಿ ಅದೇ ಗ್ರಾಮದ ಬ್ಯಾಂಕ್ ಆಫ್ ಬರೋಡಾದಲ್ಲಿ ಸಾಲ ಪಡೆದುಕೊಂಡಿದ್ದರು. ಈ ಮಧ್ಯೆ ಕೆಲ ವರ್ಷ ಕಟಬಾಕಿ ಸಹ ತುಂಬಿ ಬ್ಯಾಂಕಿನಲ್ಲಿ ತಮ್ಮ ವ್ಯವಹಾರಕ್ಕೆ ತೊಂದರೆಯಾಗದಂತೆ ನೋಡಿಕೊಂಡಿದ್ದರು. ಆದರೆ, ಇತ್ತೀಚಿನ ಕೆಲ ವರ್ಷಗಳ ಕಾಲ ರೈತರು ಸಾಲ ಮರುಪಾವತಿ ಮಾಡಿರಲಿಲ್ಲ. ಇದಕ್ಕೆ ಅತಿವೃಷ್ಟಿಯೋ ಅನಾವೃಷ್ಟಿಯೋ ಹಲವು ಕಾರಣಗಳಿರಬಹುದು. ಸದ್ಯ ರೈತರು ಸಾಲ ಮರುಪಾವತಿ ಮಾಡುವಂತೆ ಹಾಗೂ ಕಟಬಾಕಿ ತುಂಬುವಂತೆ ಆ ಬ್ಯಾಂಕ್‌ನಲ್ಲಿ ಯಾರ್‍ಯಾರು ಸಾಲ ಪಡೆದುಕೊಂಡಿದ್ದಾರೋ ಅವರೆಲ್ಲರಿಗೂ ಬ್ಯಾಂಕ್ ನೋಟಿಸ್ ನೀಡಿದೆಯಂತೆ. ಹೀಗಾಗಿ ಸದ್ಯ ಬೆಳೆ ನಷ್ಟ ಅನುಭವಿಸಿರುವ ಮೊರಬ ಗ್ರಾಮದ ರೈತರು ಆತಂಕಕ್ಕೀಡಾಗುವುದರ ಜೊತೆಗೆ ನೋಟಿಸ್ ವಾಪಸ್ ಪಡೆಯುವಂತೆ ಬ್ಯಾಂಕ್‌ಗೆ ಸೂಚನೆ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಈಗಂತೂ ನವಲಗುಂದ ಭಾಗದ ರೈತರು ಮಳೆಯಿಂದ ಬೆಳೆ ನಷ್ಟ ಅನುಭವಿಸಿದ್ದಾರೆ. ಬೆಳೆದ ಬೆಳೆ ನೀರು ಪಾಲಾಗಿದೆ. ವಾಪಸ್ ಬಿತ್ತಬೇಕು ಎಂದರೆ ಭೂಮಿ ಹದ ಇಲ್ಲ. ಇದರ ಜೊತೆಗೆ ಬೀಜ, ಗೊಬ್ಬರಕ್ಕಾಗಿ ರೈತ ಮತ್ತೆ ಸಾಲ ಮಾಡಲೇಬೇಕು. ಹೀಗಿರುವಾಗ ಸಾಲ ಮರುಪಾವತಿ ಮಾಡುವಂತೆ ನೋಟಿಸ್ ಬಂದಿರುವುದು ರೈತರನ್ನು ನಿಜಕ್ಕೂ ಆತಂಕಕ್ಕೀಡು ಮಾಡಿದೆ. ಹೀಗಾಗಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿ ರೈತರ ಪರ ನಿಲ್ಲಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತರಿಗಾಗಿ ಏನನ್ನೂ ಮಾಡಿಲ್ಲ. ಸದ್ಯ ಕಷ್ಟದಲ್ಲಿರುವ ರೈತರ ಸಾಲವನ್ನಾದರೂ ಮನ್ನಾ ಮಾಡಿ ರೈತರ ಪರ ನಿಲ್ಲಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಒಟ್ಟಾರೆ ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ರೈತರಿಗಂತೂ ಬ್ಯಾಂಕ್ ಆಫ್ ಬರೋಡಾ ಶಾಕ್ ಕೊಟ್ಟಿದೆ. ರೈತರು ಒಂದೆಡೆ ಬೆಳೆ ನಷ್ಟ ಅನುಭವಿಸುತ್ತಿದ್ದರೆ ಮತ್ತೊಂದೆಡೆ ಬ್ಯಾಂಕ್ ಸಾಲ ತುಂಬುವಂತೆ ನೋಟಿಸ್ ನೀಡಿದೆ. ಸದ್ಯ ಒಂದು ಬ್ಯಾಂಕ್ ಈ ರೀತಿ ನೋಟಿಸ್ ನೀಡಿದ್ದು, ನಾಳೆ ಇತರ ಬ್ಯಾಂಕ್‌ಗಳೂ ಸಾಲ ಮರುಪಾವತಿ ಮಾಡುವಂತೆ ರೈತರಿಗೆ ನೋಟಿಸ್ ನೀಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಸರ್ಕಾರ ಈ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ಕಾದು ನೋಡಬೇಕಿದೆ.

-ಪ್ರವೀಣ ಓಂಕಾರಿ, ಪಬ್ಲಿಕ್ ನೆಕ್ಸ್ಟ್, ಧಾರವಾಡ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/06/2025 04:11 pm

Cinque Terre

33.48 K

Cinque Terre

1

ಸಂಬಂಧಿತ ಸುದ್ದಿ